ಕಲಬುರ್ಗಿ: ಜೇವರ್ಗಿ ಶಾಸಕ ಡಾ. ಅಜಯ್ ಸಿಂಗ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಅವರ ಬೆಂಬಲಿಗರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಜೇವರ್ಗಿ ತಾಲ್ಲೂಕು ಸೊನ್ನಕ್ರಾಸ್ ಬಳಿ ಪ್ರತಿಭಟನೆ ಮಾಡಿದರು.
ಬುಧವಾರ ಬೆಳಿಗ್ಗೆ ಬೆಂಬಲಿಗರು ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದರು.
ಪ್ರತಿಭಟನೆ ನಿಮಿತ್ತ ಜೇವರ್ಗಿ- ವಿಜಯಪುರ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ.