ಈ ಸಂದರ್ಭದಲ್ಲಿ ಮಾತನಾಡಿದ ಕವಿ ದೊಡ್ಡರಂಗೇಗೌಡ, ಹಿಂದಿನ ಸರ್ಕಾರವು ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮದ ತರಗತಿಗಳನ್ನು ಆರಂಭಿಸಿದೆ. ಇದರಿಂದ ರಾಜ್ಯದಲ್ಲಿ ಕನ್ನಡ ಭಾಷೆ ಅವನತಿಯತ್ತ ಸಾಗುವಂತಾಗಿದೆ. ಭವಿಷ್ಯದಲ್ಲಿ ಗಂಭೀರ ಪರಿಣಾಮ ಬೀರುವುದರಿಂದ ಇಂಗ್ಲಿಷ್ ಮಾಧ್ಯಮದ ತರಗತಿ ನಿಲ್ಲಿಸಿ, ಕನ್ನಡ ಮಾಧ್ಯಮದ ತರಗತಿಗಳನ್ನು ಆರಂಭಿಸಬೇಕು ಎಂದು ಒತ್ತಾಯಿಸಿದರು.