ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಂಗಪ್ಪ ಅವರನ್ನು ಅಮಾನತು ಮಾಡುವಂತೆ ವಿಧಾನಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ ಅವರು ಬೆಳಗಾವಿ ಅಧಿವೇಶನದಲ್ಲಿ ಮನವಿ ಮಾಡಿದ್ದರು. ಅದರ ಮರುದಿನವೇ, ಇಲಾಖಾ ವಿಚಾರಣೆ ನಡೆಸುವಂತೆ ಕಡತವನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಕಳುಹಿಸಿದ್ದೇನೆ’ ಎಂದರು.