ಪ್ರಸ್ತಾವಿತ ಭೂಗತ ಜಲ ವಿದ್ಯುತ್ ಯೋಜನೆಯ ಪ್ರದೇಶ ಶರಾವತಿ ಅಭಯಾರಣ್ಯದ ಸುತ್ತಲಿನ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯಲ್ಲೇ ಇದೆ. ಈ ಪ್ರದೇಶದ ಅಭಿವೃದ್ಧಿ, ಕಾಳಜಿಯ ಹಿನ್ನೆಲೆಯಲ್ಲಿ ಈ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯಿಂದ ಹೊರಗಿಡಬೇಕು ಎಂದು ವೃಕ್ಷಲಕ್ಷ ಆಂದೋಲನ ಸೇರಿದಂತೆ ವಿವಿಧ ಪರಿಸರ ಸಂಘಟನೆಗಳು ರಾಜ್ಯ ಸರ್ಕಾರವನ್ನು ವಿನಂತಿಸಿದ್ದವು. ಅರಣ್ಯ, ಪರಿಸರ ರಕ್ಷಣೆ ಕಾಯ್ದೆಗಳ ಪರವಾಗಿ ವರದಿ ಅಭಿಪ್ರಾಯ ನೀಡಬೇಕಾಗಿದ್ದ ರಾಜ್ಯ ಅರಣ್ಯ ಇಲಾಖೆ, ಕಣಿವೆಯಲ್ಲಿ ಯೋಜನೆಗೆ ಅವಕಾಶ ಕಲ್ಪಿಸಬೇಕು ಎಂದು ಕೇಂದ್ರಕ್ಕೆ ಪತ್ರ ಬರೆದಿರುವುದು ಖಂಡನೀಯ ಎಂದು ಪರಿಸರವಾದಿಗಳು ಟೀಕಿಸಿದ್ದಾರೆ.