ಬಂಟ್ವಾಳ: ಹಿರಿಯ ಸಾಹಿತಿ ಏರ್ಯಲಕ್ಷೀನಾರಾಯಣ ಆಳ್ವ(94) ಅವರು ಹೃದಯಘಾತದಿಂದ ಇಂದು ಸಂಜೆ ಏರ್ಯಬೀಡು ಅವರ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ.
ಅಂಕಣಕಾರರಾಗಿ, ಸಾಹಿತ್ಯ ಸಮ್ಮೇಳನಗಳ ಅಧ್ಯಕ್ಷರಾಗಿ,ಅನೇಕ ಧಾರ್ಮಿಕ ಸಾಮಾಜಿಕ ಕಾರ್ಯಕ್ರಮಗಳ ರೂವಾರಿಯಾಗಿ , ಸಾಹಿತ್ಯದಲ್ಲಿ ವಿಶೇಷ ಸಾಧನೆಗೈದ ಹಿರಿಯ ಚೇತನ ಲಕ್ಷೀನಾರಾಯಣ ಆಳ್ವ ಅವರು ಆರೋಗ್ಯವಾಗಿಯೇ ಇದ್ದರು.
ಸಂಜೆಯ ವೇಳೆ ಅವರು ಮನೆಯಲ್ಲಿಯೇ ಹೃದಯಾಘಾತದಿಂದ ನಿಧನರಾದರು ಎಂದು ಅವರ ಸಂಬಂಧಿಕರು ತಿಳಿಸಿದ್ದಾರೆ. ಧರ್ಮಸ್ಥಳ ವೀರೇಂದ್ರ ಹೆಗ್ಗಡೆಯವರ ನಿಕಟವರ್ತಿಯಾಗಿ ಅಲ್ಲಿನ ಎಲ್ಲಾ ಕಾರ್ಯಕ್ರಮಗಳಲ್ಲಿ ಇವರು ಭಾಗಿಯಾಗುತ್ತಿದ್ದರು.
ಬಂಟ್ವಾಳ ದಲ್ಲಿ ಏರ್ಯಲಕ್ಮೀನಾರಾಯಣ ಅಳ್ವ ಅವರ ನೇತೃತ್ವದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಗಳಲ್ಲಿ ಹೆಗ್ಗಡೆಯವರು ಪಾಲ್ಗೊಳ್ಳುತ್ತಿದ್ದರು.
ಏರ್ಯ ಅವರಿಗೆ ಪತ್ನಿ ಹಾಗೂ ಮಗಳು ಅಳಿಯ ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗಇದೆ.