ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜಿಂದಾಲ್ಗೆ ಜಮೀನು ಮಾರುವ ವಿಚಾರದಲ್ಲಿ ಸರ್ಕಾರದ ಉನ್ನತ ಮಟ್ಟದ ರಾಜಕಾರಣಿಗಳೇ ಭಾಗಿಯಾಗಿದ್ದಾರೆ, ಜಮೀನು ನೀಡಬಾರದೆಂದು ಕಾಂಗ್ರೆಸ್ ಮುಖಂಡರಾದ ಎಚ್.ಕೆ.ಪಾಟೀಲ, ಎಸ್.ಆರ್.ಪಾಟೀಲ, ಆನಂದಸಿಂಗ್ ಹೇಳುತ್ತಿದ್ದಾರೆ, ಹೀಗಾಗಿ ಬಿಜೆಪಿ ಹೋರಾಟ ಮಾಡುತ್ತಿದೆಯೇ ಹೊರತು ರಾಜಕಾರಣ ಮಾಡುತ್ತಿಲ್ಲ’ ಎಂದು ಪ್ರತಿಪಾದಿಸಿದರು.