ಈ ಒಕ್ಕಣೆಯಲ್ಲಿರುವ ‘ಪ್ರಥಮ ಲೋಕಾಯುಕ್ತರಾಗಿ’ ಎನ್ನುವುದು ತಪ್ಪು ಮಾಹಿತಿ ಕೊಡುತ್ತವೆ. https://t.co/I5dSvcbApM #FactCheck #NVenkatachala
— ಪ್ರಜಾವಾಣಿ|Prajavani (@prajavani) October 30, 2019
ಲೋಕಾಯುಕ್ತ ಸಂಸ್ಥೆಗೆ ಘನತೆ ತಂದುಕೊಟ್ಟ ನ್ಯಾಯಮೂರ್ತಿ ಎನ್. ವೆಂಕಟಾಚಲ ಅವರ ನಿಧನ ತುಂಬಲಾಗದ ನಷ್ಟ. ಪ್ರತಿಯೊಬ್ಬರಿಗೂ ನ್ಯಾಯ ದೊರಕಿಸಲು ಹಾಗೂ ಭ್ರಷ್ಟಾಚಾರ ರಹಿತ ಸಮಾಜಕ್ಕಾಗಿ ಅವರು ಶ್ರಮಿಸಿದರು.
— B.S. Yediyurappa (@BSYBJP) October 30, 2019
ಅವರ ಕುಟುಂಬ ವರ್ಗ ಹಾಗೂ ಅಸಂಖ್ಯಾತ ಅಭಿಮಾನಿಗಳಿಗೆ ಅವರ ಅಗಲಿಕೆಯ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತ ನೀಡಲಿ. pic.twitter.com/xHivkit7Wa
ರಾಜ್ಯ ಲೋಕಾಯುಕ್ತ ಸಂಸ್ಥೆಗೆ ಜೀವ ತುಂಬಿ ಭ್ರಷ್ಟರಿಗೆ ಸಿಂಹಸ್ವಪ್ನವಾಗಿದ್ದ ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಹಾಗೂ ಮಾಜಿ ಲೋಕಾಯುಕ್ತರಾದ ಎನ್. ವೆಂಕಟಾಚಲ ಅವರ ನಿಧನಕ್ಕೆ ಭಾವಪೂರ್ಣ ಶ್ರದ್ಧಾಂಜಲಿ.
— BJP Karnataka (@BJP4Karnataka) October 30, 2019
ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಅವರ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ನೀಡುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇವೆ. pic.twitter.com/HJC2JKnp5u
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಹಾಗೂ ರಾಜ್ಯದ ಲೋಕಾಯುಕ್ತರಾಗಿ ಭ್ರಷ್ಟರಿಗೆ ಸಿಂಹ ಸ್ವಪ್ನರಾಗಿದ್ದ ಎನ್.ವೆಂಕಟಾಚಲ ಅವರ ಸಾವು ಆಘಾತದ ಸುದ್ದಿ. ಅವರ ಸಾವು ರಾಜ್ಯಕ್ಕೆ ತುಂಬಲಾರದ ನಷ್ಟ.
— Karnataka Congress (@INCKarnataka) October 30, 2019
ಎನ್.ವೆಂಕಟಾಚಲ ಅವರ ಸಾಧನೆ ಜೀವನ ಅನುಕರಣೀಯ, ಆದರ್ಶಮಯ.
ಅವರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸುತ್ತೇವೆ. pic.twitter.com/wHSs5vNGpC
ಕರ್ನಾಟಕದ ಮಾಜಿ ಲೋಕಾಯುಕ್ತ ಮತ್ತು ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಎನ್.ವೆಂಕಟಾಚಲ ಅವರ ನಿಧನದ ಸುದ್ದಿಕೇಳಿ ನೋವಾಯಿತು. ನ್ಯಾ.ವೆಂಕಟಾಚಲ ಅವರು ಲೋಕಾಯುಕ್ತರಾಗಿ ಭ್ರಷ್ಟರ ವಿರುದ್ಧ ಸಮರವನ್ನೇ ಸಾರಿ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ್ದರು.
— Siddaramaiah (@siddaramaiah) October 30, 2019
ಅವರ ಕುಟುಂಬಕ್ಕೆ ನನ್ನ ಸಂತಾಪಗಳು. pic.twitter.com/vPgwkcZ3fx
ಲೋಕಾಯುಕ್ತಕ್ಕೆ ಅನ್ವರ್ಥನಾಮ ಎಂಬಂತಿದ್ದ, ಭ್ರಷ್ಟರಿಗೆ ಸಿಂಹಸ್ವಪ್ನವಾಗಿದ್ದ ನಿವೃತ್ತ ನ್ಯಾಯಮೂರ್ತಿ ಎಂ.ಎನ್. ವೆಂಕಟಾಚಲ ಅವರ ನಿಧನ ಅತೀವ ನೋವುಂಟು ಮಾಡಿದೆ. ಅತ್ಯಂತ ಕ್ರಿಯಾಶೀಲ ವ್ಯಕ್ತಿತ್ವದ ಅವರು ಲೋಕಾಯುಕ್ತಕ್ಕೆ ಕಾಯಕಲ್ಪ ನೀಡಿದವರು. ಅವರ ಅಗಲಿಕೆ ಸಮಾಜದ ಬಹುದೊಡ್ಡ ನಷ್ಟ.
— H D Kumaraswamy (@hd_kumaraswamy) October 30, 2019
Sad to know that former Karnataka Lokayukta & Rtd. Supreme Court Judge Shri. N Venkatachala is no more with us. He brought discipline in the administrative system through his fight against corruption.
— B Z Zameer Ahmed Khan (@BZZameerAhmedK) October 30, 2019
My deepest condolences to his family members & well-wishers. pic.twitter.com/FcySY1kP3p
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಹಾಗೂ ರಾಜ್ಯದ ಲೋಕಾಯುಕ್ತರಾಗಿ ನಿಷ್ಠೆಯಿಂದ ಕೆಲಸ ಮಾಡಿ ಭ್ರಷ್ಟರಿಗೆ ಸಿಂಹಸ್ವಪ್ನರಾಗಿದ್ದ ಶ್ರೀ ವೆಂಕಟಾಚಲಯ್ಯನವರ ಸಾವಿನ ಸುದ್ದಿ ಕೇಳಿ ಆಘಾತವಾಗಿದೆ. ರಾಜ್ಯ ಹಾಗೂ ದೇಶ ಒಂದು ಹಿರಿಯ ಚೇತನವನ್ನು ಕಳೆದುಕೊಂಡಿದೆ. ಅವರ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿ ಕೊಡಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/EuljvMSmYp
— Dr. G Parameshwara (@DrParameshwara) October 30, 2019
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.