ವಿಜಯಪುರ ಜಿಲ್ಲೆಯ ಅರಕೇರಿ ಗ್ರಾಮದವರಾಗಿದ್ದ ಅವರು, ಕಾನೂನು ಪದವೀಧರರಾಗಿದ್ದರು. 2000ರಲ್ಲಿ ‘ದಿ ಬೆಸ್ಟ್ ಸಿಟಿಜನ್ಸ್ ಆಫ್ ಇಂಡಿಯಾ ಅವಾರ್ಡ್’, 2014ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್, 2015ರಲ್ಲಿ ಅಂಬೇಡ್ಕರ್ ಪ್ರಶಸ್ತಿ ಹಾಗೂ 2016ರಲ್ಲಿ ‘ಬಸವ ಶ್ರೀ’ ಪ್ರಶಸ್ತಿ ಲಭಿಸಿತ್ತು. ಅವರಿಗೆ ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ.