ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಘಾತ: ಮಾಜಿ ಶಾಸಕ ದತ್ತು ಹಕ್ಯಾಗೋಳ ದುರ್ಮರಣ

Last Updated 28 ಡಿಸೆಂಬರ್ 2018, 12:01 IST
ಅಕ್ಷರ ಗಾತ್ರ

ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ಹುಕ್ಕೇರಿ ತಾಲ್ಲೂಕಿನ ಹಿಟ್ನಿ ಕ್ರಾಸ್‌ನಲ್ಲಿ ಬೆಂಗಳೂರು–ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಲಾರಿ–ದ್ವಿಚಕ್ರ ವಾಹನದ ನಡುವೆ ನಡೆದ ಅಪಘಾತದಲ್ಲಿ ಹಿಂಬದಿ ಸವಾರ, ಮಾಜಿ ಶಾಸಕ ದತ್ತು ಯಲ್ಲಪ್ಪ ಹಕ್ಯಾಗೋಳ (70) ಹಾಗೂ ಸವಾರ ಸುರೇಶ ಗಡೇಕರ (50) ಮೃತಪಟ್ಟರು.

ತಾಲ್ಲೂಕಿನ ಕೇರೂರ ಗ್ರಾಮದ ದತ್ತು ಹಕ್ಯಾಗೋಳ ಅವರು ಹಿಟ್ನಿಯ ಮಸೂಬಾ ದೇವಸ್ಥಾನಕ್ಕೆ ಹೋಗುತ್ತಿದ್ದಾಗ ಅಪಘಾತ ನಡೆದಿದೆ. ಮಾಜಿ ಶಾಸಕರು ಸ್ಥಳದಲ್ಲೇ ಮೃತ‍ಪಟ್ಟರೆ, ತೀವ್ರವಾಗಿ ಗಾಯಗೊಂಡಿದ್ದ ಸವಾರ ಸುರೇಶ ಸಿವಿಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು.

ದತ್ತು ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ. 2004ರಲ್ಲಿ ಚಿಕ್ಕೋಡಿ ಮೀಸಲು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದರು. 1986ರಿಂದ 1991ರವರೆಗೆ ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದರು. ಅಶ್ರಯ ಮನೆಯಲ್ಲೇ ವಾಸವಾಗಿದ್ದ ಅವರು ಹೆಚ್ಚಾಗಿ ಬಸ್‌ನಲ್ಲಿಯೇ ಓಡಾಡುತ್ತಿದ್ದರು. ಸರಳ ಜೀವನದಿಂದ ಗಮನಸೆಳೆದಿದ್ದರು.

ಚಿಕ್ಕೋಡಿಯನ್ನು ಪ್ರತ್ಯೇಕ ಜಿಲ್ಲೆ ಮಾಡಬೇಕು ಎಂದು ನಡೆಯುತ್ತಿರುವ ಹೋರಾಟದಲ್ಲಿ ಸಕ್ರಿಯರಾಗಿದ್ದರು. ವಿಧಾನಮಂಡಲ ಅಧಿವೇಶನದಲ್ಲಿ ಚಿಕ್ಕೋಡಿ ಜಿಲ್ಲೆ ಘೋಷಣೆ ಮಾಡದಿದ್ದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT