ರಾಯಚೂರು: ಪರೀಕ್ಷಾ ಕೇಂದ್ರದ ಬದಲುಐಡಿಎಸ್ಎಂಟಿ ಬಡಾವಣೆಯ ಬಾಡಿಗೆ ಮನೆಯೊಂದರಲ್ಲಿ ಪದವಿ ಪರೀಕ್ಷೆ ಬರೆಯುತ್ತಿದ್ದ ನಗರದ ಶ್ರೀ ಚೈತನ್ಯ ಪದವಿ ಕಾಲೇಜಿನ 39 ವಿದ್ಯಾರ್ಥಿಗಳು ಹಾಗೂ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಪವನಕುಮಾರ್ ಅವರನ್ನು ಪಶ್ಚಿಮ ಠಾಣೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ಈ ವಿದ್ಯಾರ್ಥಿಗಳು ಬಿ.ಕಾಂ ಎರಡನೇ ಸೆಮಿಸ್ಟರ್ನ ಅರ್ಥಶಾಸ್ತ್ರ ಮತ್ತು ಇಂಗ್ಲಿಷ್ ವಿಷಯಗಳ ಪರೀಕ್ಷೆ ಬರೆಯುತ್ತಿದ್ದರು. ಅಲ್ಲದೆ, ಸಾಮೂಹಿಕ ನಕಲಿನಲ್ಲಿ ತೊಡಗಿಸಿಕೊಂಡಿದ್ದರು.