<p><strong>ಬೆಂಗಳೂರು: ‘</strong>ಕೊರೊನಾ ಸೋಂಕಿನ ಭೀತಿಯಿಂದಾಗಿ ಉದ್ಯಮಗಳನ್ನು ಬಂದ್ ಮಾಡಲಾಗುತ್ತಿದೆ. ಉದ್ಯೋಗ ನಷ್ಟವಾಗುತ್ತಿದೆ. ಹೀಗಾಗಿ, ಸಾಲ ಮರುಪಾವತಿಯ ಕಂತು ಕಟ್ಟಲು ಒತ್ತಡ ಹೇರಬಾರದು. ಎರಡು–ಮೂರು ತಿಂಗಳು ವಿನಾಯಿತಿ ನೀಡಬೇಕು’ ಎಂದು ಕಾಂಗ್ರೆಸ್ ಸದಸ್ಯ ಆರ್.ವಿ.ದೇಶಪಾಂಡೆ ಒತ್ತಾಯಿಸಿದರು.</p>.<p>ವಿಧಾನಸಭೆಯಲ್ಲಿ ಸೋಮವಾರ ಬಜೆಟ್ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು, ‘ಲಾಕ್ ಡೌನ್ ಮಾಡಲು ತೀರ್ಮಾನಿಸಿರುವುದು ಉತ್ತಮ ನಿರ್ಧಾರ. ಜತೆಗೆ, ಜನರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆಯೂ ಗಮನ ಹರಿಸಬೇಕು’ ಎಂದರು.</p>.<p>‘15ನೇ ಹಣಕಾಸು ಆಯೋಗದಡಿ ರಾಜ್ಯಕ್ಕೆ ಹಂಚಿಕೆಯಾಗಿದ್ದ ₹5,495 ಕೋಟಿ ವಿಶೇಷ ಅನುದಾನಕ್ಕೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಡೆ ಒಡ್ಡಿದ್ದಾರೆ. ಇದಕ್ಕೆ ರಾಜ್ಯ ಸರ್ಕಾರದ ವೈಫಲ್ಯ ಕಾರಣ’ ಎಂದು ವಾಗ್ದಾಳಿ ನಡೆಸಿದರು.</p>.<p>‘15ನೇ ಹಣಕಾಸು ಆಯೋಗವು ರಾಜ್ಯದ ಪಾಲನ್ನು ₹8,887 ಕೋಟಿಯಷ್ಟು ಕಡಿಮೆ ಮಾಡಿದೆ. ಜಿಎಸ್ಟಿ ಪರಿಹಾರ ಮೊತ್ತವೂ ಈ ವರ್ಷ ₹3 ಸಾವಿರ ಕೋಟಿ ಕಡಿಮೆಯಾಗಿದೆ. ತೆರಿಗೆ ಸಂಗ್ರಹ ಪ್ರಮಾಣವೂ ಇಳಿಮುಖವಾಗುತ್ತಿದೆ. ಇನ್ನೊಂದೆಡೆ, ರಾಜ್ಯದ ಸಾಲದ ಪ್ರಮಾಣವೂ ಹೆಚ್ಚಾಗುತ್ತಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: ‘</strong>ಕೊರೊನಾ ಸೋಂಕಿನ ಭೀತಿಯಿಂದಾಗಿ ಉದ್ಯಮಗಳನ್ನು ಬಂದ್ ಮಾಡಲಾಗುತ್ತಿದೆ. ಉದ್ಯೋಗ ನಷ್ಟವಾಗುತ್ತಿದೆ. ಹೀಗಾಗಿ, ಸಾಲ ಮರುಪಾವತಿಯ ಕಂತು ಕಟ್ಟಲು ಒತ್ತಡ ಹೇರಬಾರದು. ಎರಡು–ಮೂರು ತಿಂಗಳು ವಿನಾಯಿತಿ ನೀಡಬೇಕು’ ಎಂದು ಕಾಂಗ್ರೆಸ್ ಸದಸ್ಯ ಆರ್.ವಿ.ದೇಶಪಾಂಡೆ ಒತ್ತಾಯಿಸಿದರು.</p>.<p>ವಿಧಾನಸಭೆಯಲ್ಲಿ ಸೋಮವಾರ ಬಜೆಟ್ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು, ‘ಲಾಕ್ ಡೌನ್ ಮಾಡಲು ತೀರ್ಮಾನಿಸಿರುವುದು ಉತ್ತಮ ನಿರ್ಧಾರ. ಜತೆಗೆ, ಜನರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆಯೂ ಗಮನ ಹರಿಸಬೇಕು’ ಎಂದರು.</p>.<p>‘15ನೇ ಹಣಕಾಸು ಆಯೋಗದಡಿ ರಾಜ್ಯಕ್ಕೆ ಹಂಚಿಕೆಯಾಗಿದ್ದ ₹5,495 ಕೋಟಿ ವಿಶೇಷ ಅನುದಾನಕ್ಕೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಡೆ ಒಡ್ಡಿದ್ದಾರೆ. ಇದಕ್ಕೆ ರಾಜ್ಯ ಸರ್ಕಾರದ ವೈಫಲ್ಯ ಕಾರಣ’ ಎಂದು ವಾಗ್ದಾಳಿ ನಡೆಸಿದರು.</p>.<p>‘15ನೇ ಹಣಕಾಸು ಆಯೋಗವು ರಾಜ್ಯದ ಪಾಲನ್ನು ₹8,887 ಕೋಟಿಯಷ್ಟು ಕಡಿಮೆ ಮಾಡಿದೆ. ಜಿಎಸ್ಟಿ ಪರಿಹಾರ ಮೊತ್ತವೂ ಈ ವರ್ಷ ₹3 ಸಾವಿರ ಕೋಟಿ ಕಡಿಮೆಯಾಗಿದೆ. ತೆರಿಗೆ ಸಂಗ್ರಹ ಪ್ರಮಾಣವೂ ಇಳಿಮುಖವಾಗುತ್ತಿದೆ. ಇನ್ನೊಂದೆಡೆ, ರಾಜ್ಯದ ಸಾಲದ ಪ್ರಮಾಣವೂ ಹೆಚ್ಚಾಗುತ್ತಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>