'ಹನುಮಂತನಗರದಲ್ಲಿ ಪತ್ತೆಯಾದ ಸ್ಪೋಟಕ ವಸ್ತುವನ್ನು ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಆತಂಕಪಡುವ ಅಗತ್ಯ ಇಲ್ಲ' ಎಂದು ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ತಿಳಿಸಿದರು. ದಕ್ಷಿಣ ವಿಭಾಗದ ಡಿಸಿಪಿ ರೋಹಿಣಿ ಕಟೋಚ್ ಮಾತನಾಡಿ, 'ಮೇಲ್ನೋಟಕ್ಕೆ ಪಟಾಕಿ ಎಂದು ಕಂಡುಬಂದಿದೆ. ತಕ್ಷಣ ಬಾಂಬ್ ಸ್ಕ್ವಾಡ್ ಮತ್ತು ಎಫ್ಎಸ್ಎಲ್ ಕರೆಸಿ ಪರಿಶೀಲನೆ ನಡೆಸಿದ್ದೇವೆ' ಎಂದರು.