‘ದೃಷ್ಟಿ ಸಮಸ್ಯೆ ನಿವಾರಣೆಯಾಗುತ್ತದೆ ಎಂಬ ಕಾರಣಕ್ಕೆ ಶಸ್ತ್ರಚಿಕಿತ್ಸೆಯನ್ನು ಮಾಡಿಸಿಕೊಂಡೆವು. ಆದರೆ, ಇದೀಗ ಪೂರ್ಣ ಪ್ರಮಾಣದಲ್ಲಿ ದೃಷ್ಟಿ ಕಳೆದುಕೊಂಡಿದ್ದೇವೆ. ಅಷ್ಟೇ ಅಲ್ಲ, ಕಣ್ಣುಗಳಲ್ಲಿ ನೋವು ಕಾಣಿಸಿಕೊಳ್ಳುತ್ತಿದೆ.ಇದೀಗ ವೈದ್ಯರು ಕೈಚೆಲ್ಲಿದ್ದು, ದೃಷ್ಟಿ ಬರುತ್ತದೆ ಎಂಬ ಭರವಸೆಯನ್ನು ಕಳೆದುಕೊಂಡಿದ್ದೇವೆ. ಜೀವನ ನಡೆಸುವುದು ಕೂಡಾ ಕಷ್ಟವಾಗಿದ್ದು, ದಾರಿ ಕಾಣದಂತಾಗಿದೆ. ಆಸ್ಪತ್ರೆಯ ವೈದ್ಯರು ಸರ್ಕಾರದಿಂದ ಅಗತ್ಯ ಪರಿಹಾರವನ್ನು ಒದಗಿಸಬೇಕು’ ಎಂದು ದೃಷ್ಟಿ ಕಳೆದುಕೊಂಡವರು ಒತ್ತಾಯಿಸಿದರು.