ರಾಯಚೂರು: ಜಿಲ್ಲೆಯ ಸಿಂಧನೂರು ತಾಲ್ಲೂಕು ಜವಳಗೇರಾದಲ್ಲಿರುವ ಬೀಜಗಳ ಮಾರಾಟದ ಖಾಸಗಿ ಕಂಪೆನಿ ಕೆಲಸಕ್ಕೆ ರಾಜೀನಾಮೆ ಸಲ್ಲಿಸಿ ಹೋಗಿದ್ದ ಮಹಿಳಾ ಸಿಬ್ಬಂದಿಯೊಬ್ಬರ ಹೆಸರಿನಲ್ಲಿ ನಕಲಿ ಇ ಮೇಲ್ ಐಡಿ ಸೃಷ್ಟಿಸಿ, ಅದರಿಂದ ಕಂಪೆನಿಯ ಶಾಖಾ ಮುಖ್ಯಸ್ಥರ ವಿರುದ್ಧ ಲೈಂಗಿಕ, ಮಾನಸಿಕ ಕಿರುಕುಳ ಆರೋಪದ ಸಂದೇಶವನ್ನು ಮೇಲಧಿಕಾರಿಗಳಿಗೆ ರವಾನಿಸಿದ್ದ ಅದೇ ಶಾಖೆಯಲ್ಲಿ ಹಣಕಾಸು ಮತ್ತು ಲೆಕ್ಕಪತ್ರ ವಿಭಾಗದ ಸಹಾಯಕ ಮ್ಯಾನೇಜರ್ ದೇವಿಂದ್ರಸಿಂಗ್, ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.