ಬೆಂಗಳೂರು: ಮೈಸೂರು ಮತ್ತು ಬಳ್ಳಾರಿ ಜಿಲ್ಲೆಯಲ್ಲಿ ಇಬ್ಬರು ರೈತರು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಗಂಗಡಹೊಸಹಳ್ಳಿಯಲ್ಲಿ ಮಂಜೇಗೌಡ (35) ವಿಷ ಸೇವಿಸಿ, ಆತ್ಮಹತ್ಯೆ ಮಾಡಿಕೊಂಡರು. ಅವರಿಗೆ ತಾಯಿ, ಪತ್ನಿ,ಇಬ್ಬರು ಮಕ್ಕಳಿದ್ದಾರೆ. ಹರಪನಹಳ್ಳಿ ತಾಲ್ಲೂಕಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಹುಲಿಕಟ್ಟೆ ಗ್ರಾಮದ ಮಾಮುಸಾಬ್ (30) ಮಂಗಳವಾರ ಮೃತಪಟ್ಟರು. ಪತ್ನಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ. ಎರಡೂ ಪ್ರಕರಣಗಳಲ್ಲಿ ಕೃಷಿಗಾಗಿ ಬ್ಯಾಂಕ್ನಲ್ಲಿ ಸಾಲ ಮಾಡಿಕೊಂಡಿದ್ದರು. ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.