ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಟಸಾರ್ವಭೌಮ ಚಿತ್ರ ಉತ್ತಮವಾಗಿ ಮೂಡಿಬಂದಿದೆ: ಪುನೀತ್ ರಾಜ್‌ಕುಮಾರ್

Last Updated 5 ಜನವರಿ 2019, 11:46 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ನಟಸಾರ್ವಭೌಮ ಚಿತ್ರ ಉತ್ತಮವಾಗಿ ಮೂಡಿಬಂದಿದೆ. ನಟರು ಹಾಗೂ ತಾಂತ್ರಿಕ ವರ್ಗದವರು ತುಂಬ ಕಷ್ಟಪಟ್ಟು ಕೆಲಸ ಮಾಡಿದ್ದೇವೆ. ಇನ್ನು ಜನರು ಚಿತ್ರ ನೋಡಿ ಆಶೀರ್ವಾದ ಮಾಡಬೇಕು’ ಎಂದು ಪುನೀತ್ ರಾಜ್‌ಕುಮಾರ್ ಹೇಳಿದರು.

ನಗರದ ನೆಹರೂ ಮೈದಾನದಲ್ಲಿ ನಡೆಯಲಿರುವ ಚಿತ್ರದ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ‘ಅಭಿಮಾನಿ ದೇವರುಗಳ ಅಭಿಮಾನ ಮತ್ತು ಪ್ರೀತಿಯಿಂದ ಚಿತ್ರ ಯಶಸ್ಸು ಕಾಣಲಿದೆ ಎಂಬ ನಂಬಿಕೆ ಇದೆ’ ಎಂದರು.

‘ಹುಬ್ಬಳ್ಳಿ ನಗರ ನನಗೆ ಹೊಸದಲ್ಲ ಈ ಹಿಂದೆ ಹಲವಾರು ಬಾರಿ ಇಲ್ಲಿಗೆ ಬಂದಿದ್ದೇನೆ’ ಎಂದು ಅವರು ತಿಳಿಸಿದರು. ರಾಘವೇಂದ್ರ ರಾಜ್‌ಕುಮಾರ್, ವಿನಯ್ ರಾಜ್‌ಕುಮಾರ್ ಅವರು ಸಂಜೆ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT