ಬೆಂಗಳೂರು: ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಮುಕ್ತಾಯವಾದ ಬಳಿಕ ರಾಷ್ಟ್ರೀಕೃತ ಬ್ಯಾಂಕ್ಗಳ ಸಾಲ ಮನ್ನಾದ ₹900 ಕೋಟಿ ಮೊತ್ತವನ್ನು ಬಿಡುಗಡೆ ಮಾಡಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಈ ವರೆಗೆ 7.49 ಲಕ್ಷ ರೈತರ ₹3,929 ಕೋಟಿ ಸಾಲವನ್ನು ಮನ್ನಾ ಮಾಡಲಾಗಿದೆ. 1.5 ಲಕ್ಷ ರೈತರ ಪಟ್ಟಿ ಸಿದ್ಧವಾಗಿದ್ದು, 23ರ ನಂತರ ಹಣ ಬಿಡುಗಡೆ ಮಾಡಲಾಗುತ್ತದೆ. ಏಪ್ರಿಲ್ ಅಂತ್ಯದ ವರೆಗೆ ಸಹಕಾರ ಬ್ಯಾಂಕ್ಗಳ 8.1 ಲಕ್ಷ ರೈತರ ₹3,488 ಕೋಟಿ ಸಾಲ ಮನ್ನಾ ಮಾಡಲಾಗಿದೆ.