ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಡ್ಯ: ಸಾಲಬಾಧೆ ತಾಳಲಾರದೆ ರೈತ ದಂಪತಿ ಆತ್ಮಹತ್ಯೆ

Last Updated 20 ನವೆಂಬರ್ 2018, 7:35 IST
ಅಕ್ಷರ ಗಾತ್ರ

ಮಂಡ್ಯ: ಸಾಲಬಾಧೆ ತಾಳಲಾರದೆ ಕೆ.ಆರ್.ಪೇಟೆ ತಾಲ್ಲೂಕಿನ ಬೊಮ್ಮೇನಹಳ್ಳಿ ಗ್ರಾಮದ ರೈತ ದಂಪತಿ ಸೋಮವಾರ ರಾತ್ರಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೋರಲಿಂಗೇಗೌಡ (60), ಲಕ್ಷ್ಮಮ್ಮ (52) ಮೃತ ದಂಪತಿ.

ಗ್ರಾಮದ ಮುತ್ತುರಾಯ ದೇವಾಲಯದ ಪಕ್ಕದಲ್ಲಿರುವ ತಮ್ಮ ಜಮೀನಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ

ಮಂಗಳವಾರ ಬೆಳಿಗ್ಗೆ ಜಮೀನಿನಲ್ಲಿ ಬಿದ್ದಿದ್ದ ಮೃತ ದೇಹಗಳನ್ನು ಕಂಡ ಗ್ರಾಮಸ್ಥರು ಪೊಲೀಸ್ ಠಾಣೆಗೆ ವಿಷಯ ತಿಳಿಸಿದರು.

ವಿವಿಧ ಬ್ಯಾಂಕ್ ಹಾಗೂ ಲೇವಾದೇವಿಗಾರರಿಂದ ₹6 ಲಕ್ಷಕ್ಕೂ ಹೆಚ್ಚು ಸಾಲ ಇತ್ತು. ಗ್ರಾಮಾಂತರ ಠಾಣೆಯ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಗ್ರಾಮದಲ್ಲಿ ಆವರಿಸಿದ ಸ್ಮಶಾನ ಮೌನ ಆವರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT