ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರಿಗೆ ಶೂನ್ಯ ಬಡ್ಡಿಯಲ್ಲಿ ₹ 3 ಲಕ್ಷದವರೆಗೆ ಸಾಲ, ಷರತ್ತು ಸಡಿಲಿಸಿ ಆದೇಶ

Last Updated 22 ಮೇ 2020, 7:11 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ರೈತರಿಗೆ ಪತ್ತಿನ ಸಹಕಾರ ಸಂಸ್ಥೆಗಳು 2019-20ನೇ ಸಾಲಿನಲ್ಲಿ ಶೂನ್ಯ ಬಡ್ಡಿ ದರದಲ್ಲಿ ₹3 ಲಕ್ಷದ ವರೆಗೆ ಅಲ್ಪಾವಧಿ ಕೃಷಿ ಸಾಲ ನೀಡುವ ವಿಷಯದಲ್ಲಿ ತನ್ನ ಹಿಂದಿನ ಕೆಲವು ಷರತ್ತುಗಳನ್ನು ಸಡಿಲಿಸಿ ಸಹಕಾರ ಇಲಾಖೆ ಆದೇಶ ಹೊರಡಿಸಿದೆ.

ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡಬೇಕೆಂದು ಸರ್ಕಾರ ಮಾರ್ಚ್ 30ರಂದು ಹೊರಡಿಸಿದ ಆದೇಶದಲ್ಲಿನ ಕೆಲವು ಷರತ್ತುಗಳನ್ನು ಈಡೇರಿಸಲು ಸಾಧ್ಯವಿಲ್ಲ. ಸಾಲ ವಿತರಣಾ ಅವಧಿ ಮುಕ್ತಾಯವಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಷರತ್ತುಗಳನ್ನು ಪಾಲಿಸಲು ಕಷ್ಟವಾಗಿದೆ ಎಂದು ಡಿಸಿಸಿ ಬ್ಯಾಂಕುಗಳ ಅಧ್ಯಕ್ಷರು ಮತ್ತು ಸಹಕಾರಿಗಳು ಮನವಿ ಮಾಡಿದ್ದರು. ಹೀಗಾಗಿ ಸರ್ಕಾರ ಹೊಸದಾಗಿ ಕೆಲವು ಮಾರ್ಪಾಡು ಮಾಡಿದ ಷರತ್ತುಗಳೊಂದಿಗೆ ಸಾಲ ನೀಡಿಕೆಯ ಆದೇಶ ನೀಡಿದೆ.

ಶೂನ್ಯ ಬಡ್ಡಿ ದರ ₹3 ಲಕ್ಷದವರೆಗಿನ ಸಾಲಕ್ಕೆ ಮಾತ್ರ ಅನ್ವಯ, ₹3 ಲಕ್ಷಕ್ಕಿಂತ ಹೆಚ್ಚಿನ ಸಾಲದ ಸಂಪೂರ್ಣ ಮೊತ್ತಕ್ಕೆ ಸಾಮಾನ್ಯ ಬಡ್ಡಿ ಅನ್ವಯವಾಗುತ್ತದೆ ಎಂದು ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT