ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭತ್ತ ಖರೀದಿ: ಪ್ರಮಾಣಪತ್ರ ನೀಡಬೇಕಿಲ್ಲ– ಜಮೀರ್

ದಾಖಲೆ ಕೇಳಿ ರೈತರಿಗೆ ಕಿರುಕುಳ: ಆರೋಪ
Last Updated 13 ಡಿಸೆಂಬರ್ 2018, 19:20 IST
ಅಕ್ಷರ ಗಾತ್ರ

ಬೆಳಗಾವಿ: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿಗೆ ರೈತರು ಹೆಸರು ನೋಂದಣಿ ಮಾಡಿಸುವಾಗ ಯಾವುದೇ ಪ್ರಮಾಣಪತ್ರ ನೀಡುವ ಅಗತ್ಯವಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಸಚಿವ ಜಮೀರ್‌ ಅಹ್ಮದ್ ಖಾನ್‌ ಹೇಳಿದ್ದಾರೆ.

ಆಧಾರ್‌ ಕಾರ್ಡ್, ಆರ್‌ಟಿಸಿ (ಪಹಣಿ), ಬ್ಯಾಂಕ್‌ ಖಾತೆ ಸಂಖ್ಯೆ, ಐಎಫ್‌ಎಸ್‌ಸಿ ಕೋಡ್‌ ಹಾಗೂ ಮೊಬೈಲ್‌ ಸಂಖ್ಯೆ ನೀಡಿ ರೈತರು ಹೆಸರು ನೋಂದಣಿ ಮಾಡಿಸಬಹುದು ಎಂದಿದ್ದಾರೆ.

ಕೆಲವೆಡೆ ಅನಗತ್ಯ ದಾಖಲೆಗಳನ್ನು ಕೇಳಿ ರೈತರಿಗೆ ಕಿರುಕುಳ ನೀಡಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ. ಸರ್ಕಾರ ನಿಗದಿಪಡಿಸಿದ ದಾಖಲೆ ಹೊರತುಪಡಿಸಿ ಬೇರೆ ಕೇಳಿದರೆ, ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಬೆಂಬಲ ಬೆಲೆಯಡಿ ಭತ್ತ ಮಾರಾಟ ಮಾಡಲು ಮುಂದಾಗುವ ರೈತರಿಗೆ ಹಲವಾರು ದಾಖಲೆಗಳನ್ನು ಕೇಳುವುದರಿಂದ ಪರದಾಡುವಂತಾಗಿದೆ ಎಂದು ವಿಧಾನಸಭೆಯಲ್ಲಿ ಶಾಸಕರು ಸರ್ಕಾರದ ಗಮನ ಸೆಳೆದಿದ್ದರು.

ದಾಖಲೆ ಕೇಳುತ್ತಿರುವುದರಿಂದ ಆಗುವ ತೊಂದರೆ ಖಂಡಿಸಿ ರೈತರು ಹಲವೆಡೆ ಪ್ರತಿಭಟಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT