‘ನೀರಾವರಿ ಇರುವ ರೈತರು ಹೊಲಗಳ ಪೈಪ್ಲೈನ್, ಬ್ಯಾಂಕ್ನಿಂದ ಟ್ರ್ಯಾಕ್ಟರ್ ಹಾಗೂ ಇತರ ಕೃಷಿ ಚಟುವಟಿಕೆಗಳಿಗಾಗಿ ಮಧ್ಯಮ ಅವಧಿ ಸಾಲ ಪಡೆದುಕೊಂಡಿದ್ದಾರೆ. ಬ್ಯಾಂಕ್ ಅಧಿಕಾರಿಗಳು ಮತ್ತು ಪಿಕೆಪಿಎಸ್ ಕಾರ್ಯದರ್ಶಿಗಳು ರೈತರಿಗೆ ಮನವರಿಕೆ ಮಾಡಿ, ಬಡ್ಡಿ ಮನ್ನಾದ ಲಾಭ ಪಡೆದುಕೊಳ್ಳಲು ಪ್ರೇರೇಪಿಸಿದ್ದಾರೆ. ಹೀಗಾಗಿ, ಒಂದೇ ತಿಂಗಳಲ್ಲಿ ದೊಡ್ಡ ಕೊತ್ತದ ಸಾಲ ವಸೂಲಾಗಿದೆ’ ಎಂದು ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ವಿಶ್ವನಾಥ ಮಲಕೂಡ ತಿಳಿಸಿದ್ದಾರೆ.