ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಲಮನ್ನಾದ ಗುಂಗಿನಲ್ಲಿ ಎಚ್‌ಡಿಕೆ: ಬಿಎಸ್‌ವೈ ಲೇವಡಿ

Last Updated 1 ಸೆಪ್ಟೆಂಬರ್ 2018, 18:18 IST
ಅಕ್ಷರ ಗಾತ್ರ

ಸಿಂದಗಿ (ವಿಜಯಪುರ ಜಿಲ್ಲೆ): ‘ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, ಸಾಲ ಮನ್ನಾದ ಸೋಗು ಹಾಕಿಕೊಂಡು ತಿರುಗುತ್ತಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಲೇವಡಿ ಮಾಡಿದರು.

ಶನಿವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯ ಸರ್ಕಾರ ಬಹಳ ದಿನ ಉಳಿಯುವುದಿಲ್ಲ. ಅವರವರೇ ಕಚ್ಚಾಡಿಕೊಂಡು ಸರ್ಕಾರ ಬೀಳಿಸುತ್ತಾರೆ. ಕುಮಾರಸ್ವಾಮಿ, ರಾಜ್ಯ ಕಾಂಗ್ರೆಸ್ ಮುಖಂಡರ ವಿರುದ್ಧ ರಾಹುಲ್‌ ಗಾಂಧಿಗೆ ದೂರು ನೀಡುತ್ತಿದ್ದಾರೆ; ರಾಜ್ಯ ಸರ್ಕಾರದ ಬಗ್ಗೆ ಜನ ಹಿಡಿಶಾಪ ಹಾಕುತ್ತಿದ್ದಾರೆ’ ಎಂದರು.

‘ಉತ್ತರ ಕರ್ನಾಟಕದಲ್ಲಿ ಭೀಕರ ಬರವಿದ್ದರೂ ಮುಖ್ಯಮಂತ್ರಿ ಭೇಟಿ ನೀಡಿಲ್ಲ. ಹಾಸನ ಸೇರಿದಂತೆ ಮೂರು ಜಿಲ್ಲೆಗಳಿಗೆ ಸರ್ಕಾರ ಸೀಮಿತವಾಗಿದೆ. ಸಚಿವರು ಇದ್ದಾರೋ ಸತ್ತಿದ್ದಾರೋ ತಿಳಿಯುತ್ತಿಲ್ಲ’ ಎಂದು ಕಿಡಿಕಾರಿದ ಅವರು, ರಾಜ್ಯ ಸರ್ಕಾರ ಮತ್ತು ಸಮನ್ವಯ ಸಮಿತಿ ಎರಡೂ ಸತ್ತು ಹೋಗಿವೆ ಎಂದು ಕುಟುಕಿದರು.

‘ನಾನು ಮೊದಲಿಂದಲೂ ದೈವಭಕ್ತ. ಕುಮಾರಸ್ವಾಮಿ, ಈಗ ಟೆಂಪಲ್ ರನ್ ಯಾಕೆ ಮಾಡುತ್ತಿದ್ದಾರೆ ಎಂಬುವುದು ಅವರನ್ನೇ ಕೇಳಿ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT