‘ನೆರೆ ಸಂತ್ರಸ್ತರಿಗೆ ಪರಿಹಾರ ನೀಡಬೇಕು. ಮನೆ ಕಳೆದು ಕೊಂಡಿರುವವರಿಗೆ ಮನೆ ಕಟ್ಟಿಸಿ ಕೊಡಬೇಕು. ಮುಳುಗಡೆ ಪ್ರದೇಶಗಳನ್ನು ಸ್ಥಳಾಂತರಿಸಬೇಕು. ಸಾಲ ಪಾವತಿಸುವಂತೆ ಬ್ಯಾಂಕ್ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದು, ಅವರ ವರ್ತನೆಗೆ ಕಡಿವಾಣ ಹಾಕಬೇಕು’ ಎಂದು ರೈತರು ಆಗ್ರಹಿಸಿದರು. ‘ಕೆಲ ದಿನಗಳ ಹಿಂದಷ್ಟೇ ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗಿತ್ತು. ಸ್ಥಳಕ್ಕೆ ಬಂದಿದ್ದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರು. ಇದುವರೆಗೂ ಬೇಡಿಕೆಗಳು ಈಡೇರಿಲ್ಲ’ ಎಂದು ದೂರಿದರು.