ರೈತ ನಾಯಕಿ ಸುನಂದಾ ಜಯರಾಂ ಮಾತನಾಡಿ ‘ವಿವಿಧ ಸರ್ಕಾರಗಳ ಅವಧಿಯಲ್ಲಿ ಮೈಷುಗರ್ ಕಾರ್ಖಾನೆಯಲ್ಲಿ ₹ 504 ಕೋಟಿ ಅವ್ಯವಹಾರ ನಡೆದಿದೆ. ಈ ಕುರಿತು ಶೀಘ್ರ ದಾಖಲೆ ಬಿಡುಗಡೆ ಮಾಡಲಾಗುವುದು. ಭ್ರಷ್ಟಾಚಾರ ಮುಚ್ಚಿಟ್ಟುಕೊಳ್ಳಲು ಸರ್ಕಾರ ಖಾಸಗೀಕರಣ, ಕಾರ್ಯಾಚರಣೆ ಮತ್ತು ನಿರ್ವಹಣೆ (ಒ ಅಂಡ್ ಎಂ) ಎಂಬ ನೆಪ ಹೇಳುತ್ತಿದೆ. ಸರ್ಕಾರದ ನಡೆ ವಿರುದ್ಧ ಜೂನ್ 15 ರಂದು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು’ ಎಂದರು.