ತಮಿಳುನಾಡಿನ ನಿವಾಸಿ, ಸಾಫ್ಟ್ ವೇರ್ ಎಂಜಿನಿಯರ್ ಲಕ್ಷ್ಮಿ ಶಂಕರಿ ಎಂಬಾಕೆಯನ್ನು ಪ್ರೀತಿಸಿ ಕೆಲವು ವರ್ಷಗಳ ಹಿಂದೆ ಜತಿನ್ ಮದುವೆಯಾಗಿದ್ದ. ಲಕ್ಷ್ಮಿ ಕೆಲಸಕ್ಕೆ ಹೋಗುತ್ತಿದ್ದರೆ, ಈತ ಎಲ್ಲೂ ಹೋಗದೆ ಮನೆಯಲ್ಲೇ ಇದ್ದ. ಅಲ್ಲದೆ, ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದ. ಇದೇ ಕಾರಣಕ್ಕೆ ಗಂಡ ಹೆಂಡತಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಶುಕ್ರವಾರ ಕೂಡಾ ಜಗಳ ನಡೆದಿದ್ದು, ಈ ವೇಳೆ ಆತ ಮಕ್ಕಳ ಮೇಲೆ ಕ್ರೌರ್ಯ ಮೆರೆದಿದ್ದಾನೆ ಎಂದೂ ಗೊತ್ತಾಗಿದೆ.