ರಸಗೊಬ್ಬರ, ಕೀಟನಾಶಕ ಸೇರಿಂತೆ ಕೃಷಿಸಂಬಂಧಿತ ಎಲ್ಲ ಪರಿಕರಗಳನ್ನು ಅತ್ಯವಶ್ಯಕ ವಸ್ತುಗಳ ಪಟ್ಟಿಗೆ ಸೇರಿಸಿ ಉತ್ಪಾದನೆ ಹಾಗೂ ಸಾಗಣೆ ಮೇಲಿನ ನಿರ್ಬಂಧವನ್ನು ಕೇಂದ್ರ ಸರ್ಕಾರವು ಸಂಪೂರ್ಣ ತೆಗೆದುಹಾಕಿತು.ರಸಗೊಬ್ಬರ ಕಾರ್ಖಾನೆಗಳು, ಗೋದಾಮುಗಳು, ಬಂದರಗಳು, ವಿತರಣಾ ಕೇಂದ್ರಗಳ ಮಧ್ಯೆ ರಸಗೊಬ್ಬರ ಸಾಗಣೆ ಬೇಡಿಕೆಗೆ ಅನುಗುಣವಾಗಿ ಗೂಡ್ಸ್ ರೈಲುಗಳನ್ನು ಒದಗಿಸುವಂತೆ ರೇಲ್ವೆ ಇಲಾಖೆಗೆ ಕೇಂದ್ರ ಸರ್ಕಾರವು ಕಟ್ಟುನಿಟ್ಟಿನ ಆದೇಶ ನೀಡಿದೆ. ಹಾಗಿಯೇ ಜಲ ಹಾಗೂ ಭೂಸಾರಿಗೆಗೆ ರಸಗೊಬ್ಬರ, ಕೀಟನಾಶಕ ಮತ್ತಿತರ ಕೃಷಿಸಂಬಂಧಿತ ಸರಕುಗಳನ್ನು ಸಾಗಾಣಿಕೆಗೆ ಮುಕ್ತ ಅನುಮತಿ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.