ನಗರದ 29 ವರ್ಷದ ಮಹಿಳೆ ಸಲ್ಲಿಸಿರುವ ಈ ಅರ್ಜಿಯನ್ನು ನ್ಯಾಯಮೂರ್ತಿ ಬಿ.ವೀರಪ್ಪ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆಗೆ ಅಂಗೀಕರಿಸಿದೆ. ಅರ್ಜಿ ಮಾನ್ಯ ಮಾಡಿದ ನ್ಯಾಯಪೀಠ, ‘ತಕ್ಷಣವೇ ಈ ಕುರಿತು, ವೈದ್ಯಕೀಯ ಸೂಪರಿಂಟೆಂಡೆಂಟ್ ನೇತೃತ್ವದಲ್ಲಿ ವಾಣಿ ವಿಲಾಸ ಆಸ್ಪತ್ರೆಯ ತಜ್ಞ ವೈದ್ಯರ ತಂಡ ರಚಿಸಬೇಕು ಮತ್ತು ಡಿ.14ರ ಬೆಳಿಗ್ಗೆ 11ಕ್ಕೆ ಮಹಿಳೆಯ ಪರೀಕ್ಷೆ ನಡೆಸಿ, ವರದಿ ನೀಡಲು ಸೂಚಿಸಿತು.