ಸಾಂಬ್ರಾ ವಿಮಾನನಿಲ್ದಾಣದಲ್ಲಿ ಗುರುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರು ಬೆಳಿಗ್ಗೆ ನಮ್ಮ ಮನೆಗೆ ಬಂದು ಉಪಾಹಾರ ಸೇವಿಸಿ ಹೋಗಿದ್ದಾರೆ? ಬಿಬಿಎಂಪಿ ಮೇಯರ್ ಆಗಿ ನಮ್ಮವರನ್ನೇ ಆಯ್ಕೆ ಮಾಡಿದ್ದೇವೆ. ಮುಸುಕಿನ ಗುದ್ದಾಟ ನಡೆಯುತ್ತಿರುವುದು ಯಾವ ಪಕ್ಷದಲ್ಲಿ ಎಂದು ನನ್ನಿಂದಲೇ ಹೇಳಿಸಬೇಡಿ’ ಎಂದು ನಗುತ್ತಲೇ ಹೇಳಿದರು.