<p><strong>ಹುಬ್ಬಳ್ಳಿ:</strong> ‘ರಾಷ್ಟ್ರೀಯ ಪೌರತ್ವ ನೋಂದಣಿಯಿಂದ ಭಾರತದ ಯಾವುದೇ ನಾಗರಿಕನ ಪೌರತ್ವ ರದ್ದಾದರೆ, ನಾನೂ ಹೋರಾಟ ಮಾಡುತ್ತೇನೆ’ ಎಂದು ಪತಂಜಲಿ ಯೋಗ ಪೀಠದ ಸಂಸ್ಥಾಪಕ ಬಾಬಾ ರಾಮದೇವ್ ಹೇಳಿದರು.</p>.<p>ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿಎಎ, ಎನ್ಆರ್ಸಿ ಬಗ್ಗೆ ಮುಸ್ಲಿಮರಲ್ಲಿ ತಪ್ಪು ಅಭಿಪ್ರಾಯ ಮೂಡಿಸಲಾಗುತ್ತಿದೆ. ಯಾರದ್ದೂ ಪೌರತ್ವ ರದ್ದಾಗುವುದಿಲ್ಲ. ದೇಶದ ಮೇಲೆ ಹಿಂದೂಗಳಿರುವಷ್ಟೇ ಹಕ್ಕು ಮುಸ್ಲಿಮರಿಗೂ ಇದೆ’ ಎಂದರು.</p>.<p>‘ದೇಶದ ಆರ್ಥಿಕ ಪ್ರಗತಿಗೆ ಹಿಂದೂ–ಮುಸ್ಲಿಮರು ಒಗ್ಗಟ್ಟಾಗಿ ಹೋಗಬೇಕು. ಶೇ 99ರಷ್ಟು ಮುಸ್ಲಿಮರು ದೇಶಭಕ್ತರಾಗಿದ್ದಾರೆ. ಶೇ 1ರಷ್ಟು ಮಂದಿ ಕೆಟ್ಟ ಹೆಸರು ತರುವ ಕೆಲಸ ಮಾಡುತ್ತಿದ್ದಾರೆ. ಅವರನ್ನು ಬಹಿಷ್ಕರಿಸಲು ಮುಸ್ಲಿಮರು ಮುಂದಾಗಬೇಕು’ ಎಂದು ಹೇಳಿದರು.</p>.<p>‘ಪ್ರಧಾನಿ ನರೇಂದ್ರ ಮೋದಿ ಮುಸ್ಲಿಂ ವಿರೋಧಿ ಮನೋಭಾವ ಹೊಂದಿಲ್ಲ. ಹಿಂದೂಗಳಷ್ಟೇ ಮುಸ್ಲಿಮರದ್ದೂ ಹಕ್ಕಿದೆ. ಅವರೊಂದಿಗೆ ಜೊತೆಯಾಗಿ ಮುನ್ನಡೆಯಬೇಕು ಎಂದು ಅವರು ಹಲವಾರು ಬಾರಿ ಹೇಳಿದ್ದಾರೆ’ ಎಂದು ಅವರು ತಿಳಿಸಿದರು.</p>.<p>ಸಿದ್ಧಗಂಗಾ ಮಠದ ಲಿಂಗೈಕ್ಯ ಶಿವಕುಮಾರಸ್ವಾಮೀಜಿ, ಸ್ವಾಮಿ ವಿವೇಕಾನಂದ, ದಯಾನಂದ ಅವರಂಥಸಂತರಿಗೆ ಭಾರತರತ್ನ ನೀಡಬೇಕು ಎಂದು ಹೇಳಿದರು.</p>.<p>ಕಪ್ಪು ಹಣ ವಾಪಸ್ ತರಲು, ಭ್ರಷ್ಟಾಚಾರ ತಡೆಗೆ ಇನ್ನಷ್ಟು ಕ್ರಮಗಳನ್ನು ಕೈಗೊಳ್ಳುವ ಅವಶ್ಯಕತೆ ಇದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ‘ರಾಷ್ಟ್ರೀಯ ಪೌರತ್ವ ನೋಂದಣಿಯಿಂದ ಭಾರತದ ಯಾವುದೇ ನಾಗರಿಕನ ಪೌರತ್ವ ರದ್ದಾದರೆ, ನಾನೂ ಹೋರಾಟ ಮಾಡುತ್ತೇನೆ’ ಎಂದು ಪತಂಜಲಿ ಯೋಗ ಪೀಠದ ಸಂಸ್ಥಾಪಕ ಬಾಬಾ ರಾಮದೇವ್ ಹೇಳಿದರು.</p>.<p>ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿಎಎ, ಎನ್ಆರ್ಸಿ ಬಗ್ಗೆ ಮುಸ್ಲಿಮರಲ್ಲಿ ತಪ್ಪು ಅಭಿಪ್ರಾಯ ಮೂಡಿಸಲಾಗುತ್ತಿದೆ. ಯಾರದ್ದೂ ಪೌರತ್ವ ರದ್ದಾಗುವುದಿಲ್ಲ. ದೇಶದ ಮೇಲೆ ಹಿಂದೂಗಳಿರುವಷ್ಟೇ ಹಕ್ಕು ಮುಸ್ಲಿಮರಿಗೂ ಇದೆ’ ಎಂದರು.</p>.<p>‘ದೇಶದ ಆರ್ಥಿಕ ಪ್ರಗತಿಗೆ ಹಿಂದೂ–ಮುಸ್ಲಿಮರು ಒಗ್ಗಟ್ಟಾಗಿ ಹೋಗಬೇಕು. ಶೇ 99ರಷ್ಟು ಮುಸ್ಲಿಮರು ದೇಶಭಕ್ತರಾಗಿದ್ದಾರೆ. ಶೇ 1ರಷ್ಟು ಮಂದಿ ಕೆಟ್ಟ ಹೆಸರು ತರುವ ಕೆಲಸ ಮಾಡುತ್ತಿದ್ದಾರೆ. ಅವರನ್ನು ಬಹಿಷ್ಕರಿಸಲು ಮುಸ್ಲಿಮರು ಮುಂದಾಗಬೇಕು’ ಎಂದು ಹೇಳಿದರು.</p>.<p>‘ಪ್ರಧಾನಿ ನರೇಂದ್ರ ಮೋದಿ ಮುಸ್ಲಿಂ ವಿರೋಧಿ ಮನೋಭಾವ ಹೊಂದಿಲ್ಲ. ಹಿಂದೂಗಳಷ್ಟೇ ಮುಸ್ಲಿಮರದ್ದೂ ಹಕ್ಕಿದೆ. ಅವರೊಂದಿಗೆ ಜೊತೆಯಾಗಿ ಮುನ್ನಡೆಯಬೇಕು ಎಂದು ಅವರು ಹಲವಾರು ಬಾರಿ ಹೇಳಿದ್ದಾರೆ’ ಎಂದು ಅವರು ತಿಳಿಸಿದರು.</p>.<p>ಸಿದ್ಧಗಂಗಾ ಮಠದ ಲಿಂಗೈಕ್ಯ ಶಿವಕುಮಾರಸ್ವಾಮೀಜಿ, ಸ್ವಾಮಿ ವಿವೇಕಾನಂದ, ದಯಾನಂದ ಅವರಂಥಸಂತರಿಗೆ ಭಾರತರತ್ನ ನೀಡಬೇಕು ಎಂದು ಹೇಳಿದರು.</p>.<p>ಕಪ್ಪು ಹಣ ವಾಪಸ್ ತರಲು, ಭ್ರಷ್ಟಾಚಾರ ತಡೆಗೆ ಇನ್ನಷ್ಟು ಕ್ರಮಗಳನ್ನು ಕೈಗೊಳ್ಳುವ ಅವಶ್ಯಕತೆ ಇದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>