ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡುವ ಅಧಿಕಾರಿಗಳಿಗೆ ದಂಡ ನಿಗದಿಪಡಿಸುವ ಸಂಬಂಧ ಕರಡು ನಿಯಮಗಳನ್ನು ರೂಪಿಸಲಾಗಿದೆ ಎಂದುರಾಜ್ಯ ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.
ಈ ಕುರಿತ ಕರಡು ಅಧಿಸೂಚನೆಯನ್ನು ವಿಭಾಗೀಯ ನ್ಯಾಯಪೀಠಕ್ಕೆ ನೀಡಿದ ಸರ್ಕಾರದ ಪರ ವಕೀಲರು, ‘ನಿಯಮಗಳಿಗೆ ಆಕ್ಷೇಪಣೆ ಸಲ್ಲಿಸಲು 30 ದಿನ ಕಾಲಾವಕಾಶ ನೀಡಲಾಗಿದೆ’ಎಂದು ತಿಳಿಸಿದರು.
ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸುವಂತೆ ಅರ್ಜಿದಾರರಿಗೆ ನಿರ್ದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ನವೆಂಬರ್ 18ಕ್ಕೆಮುಂದೂಡಿದೆ.