ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಐಸಿಸಿ ಟ್ವೀಟ್‌ ವಿರುದ್ಧ ಹೊಳಲ್ಕೆರೆಯ ಚಿತ್ರಹಳ್ಳಿ ಠಾಣೆಯಲ್ಲಿ ಎಫ್‌ಐಆರ್‌

Last Updated 22 ಮೇ 2020, 15:24 IST
ಅಕ್ಷರ ಗಾತ್ರ

ಚಿತ್ರದುರ್ಗ: ಕೋವಿಡ್‌–19 ವಿರುದ್ಧ ಹೋರಾಡಲು ಕೇಂದ್ರ ಸರ್ಕಾರ ಸ್ಥಾಪಿಸಿದ ‘ಪಿಎಂ ಕೇರ್‌ ನಿಧಿ’ಯ ಬಗ್ಗೆ ತಪ್ಪು ಮಾಹಿತಿ ನೀಡಿ ಗೊಂದಲ ಸೃಷ್ಟಿಸಿದ ಆರೋಪದ ಮೇರೆಗೆ ಕಾಂಗ್ರೆಸ್‌ ವಿರುದ್ಧ ಹೊಳಲ್ಕೆರೆ ತಾಲ್ಲೂಕಿನ ಚಿತ್ರಹಳ್ಳಿ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಸೋನಿಯಾ ಗಾಂಧಿ ಟೀಕಿಸಿದ್ದರು ಎನ್ನಲಾದ ಮಾಹಿತಿಯನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿತ್ತು. ಇದರ ವಿರುದ್ಧ ವಕೀಲ ಧನಂಜಯ ಎಂಬುವರು ದೂರು ನೀಡಿದ್ದಾರೆ. ದೂರಿನಲ್ಲಿ ಸೋನಿಯಾ ಗಾಂಧಿ ಅವರ ಹೆಸರಿದೆ. ಆದರೆ, ಎಫ್‌ಐಆರ್‌ನ ಆರೋಪಿತರ ಪಟ್ಟಿಯಲ್ಲಿ ಅಪರಿಚಿತ ಎಂದಷ್ಟೇ ನಮೂದಿಸಲಾಗಿದೆ.

‘ದೂರಿನಲ್ಲಿ ಅವಹೇಳನ ಮಾಡಿದ ವ್ಯಕ್ತಿಯ ಸ್ಪಷ್ಟ ಉಲ್ಲೇಖವಿಲ್ಲ. ಸ್ಥಳ ಹಾಗೂ ಸಮಯದ ಬಗ್ಗೆಯೂ ಮಾಹಿತಿ ಇಲ್ಲ. ಹೀಗಾಗಿ, ಅಪರಿಚಿತ ವ್ಯಕ್ತಿ ಎಂದಷ್ಟೇ ನಮೂದಿಸಲಾಗಿದೆ. ತನಿಖೆಯ ಸಂದರ್ಭದಲ್ಲಿ ಆರೋಪಿತರನ್ನು ಪತ್ತೆ ಮಾಡಲಾಗುವುದು’ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT