‘ಈ ನಾಲ್ವರು ಶಿಕ್ಷಕರು ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯದ ಮೇಲೆ ಇದ್ದವರಲ್ಲ. ನಾನು ದಿಢೀರ್ ಭೇಟಿ ನೀಡಿದ ಸಂದರ್ಭ ಇವರು ಓಡಿ ಹೋಗಲು ಯತ್ನಿಸಿದರು. ತಕ್ಷಣ ಅವರನ್ನು ತಡೆದು ವಿಚಾರಣೆ ನಡೆಸಿದಾಗ, ಅವರ ಬಳಿ ದ್ವಿತೀಯ ಭಾಷಾ ಪತ್ರಿಕೆಗೆ ಸಂಬಂಧಿಸಿದ ನಕಲು ಚೀಟಿಗಳು ಇದ್ದವು. ಹಾಗಾಗಿ ಅವರನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದೇನೆ’ ಎಂದು ತಹಶೀಲ್ದಾರ್ ಆರ್.ಎಚ್. ಭಾಗವಾನ್ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದ್ದಾರೆ.