ಕುಮಾರಸ್ವಾಮಿ ರಾತ್ರಿ ಪ್ರಚಾರ ಮುಗಿಸಿ ಕೆಆರ್ಎಸ್ನ ಖಾಸಗಿ ಹೋಟೆಲ್ ನಲ್ಲಿ ತಂಗಲು ತೆರಳುತ್ತಿದ್ದಾಗ ತಮ್ಮ ರೇಂಜ್ ರೋವರ್ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿತು. ಎಂಜಿನ್ ಬಿಸಿಯಾಗಿದ್ದು ಹೊಗೆ ಕಾಣಿಸಿಕೊಂಡು ತಕ್ಷಣ ಬೆಂಕಿ ಹೊತ್ತಿಕೊಂಡಿದೆ. ಭದ್ರತಾ ಸಿಬ್ಬಂದಿ ಮುಖ್ಯಮಂತ್ರಿಯನ್ನು ಕೆಳಗಿಳಿಸಿ ಬೇರೆ ಕಾರಿನಲ್ಲಿ ಕಳುಹಿಸಿದರು. ಭದ್ರತಾ ಸಿಬ್ಬಂದಿ ಹಾಗೂ ಸ್ಥಳೀಯರು ಬೆಂಕಿ ನಂದಿಸಿದರು. ಎಂಜಿನ್ ಆಯಿಲ್ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.