ಬೆಂಗಳೂರು: ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ವಿವಿಧ ವೃಂದಗಳಲ್ಲಿ ಖಾಲಿ ಇರುವ 1,567 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಗ್ನಿಶಾಮಕ ಠಾಣಾಧಿಕಾರಿ 36, ಅಗ್ನಿಶಾಮಕ ಚಾಲಕರು 227, ಚಾಲಕ ತಂತ್ರಜ್ಞರು 82 ಮತ್ತು ಅಗ್ನಿಶಾಮಕರ 1,222 ಹುದ್ದೆಗಳಿಗೆ ಈ ನೇಮಕಾತಿ ನಡೆಯಲಿದೆ.
ಆಸಕ್ತರು ಅಂತರ್ಜಾಲ ತಾಣ www.ksp.gov.in ಲಾಗ್ಇನ್ ಆಗಿ ಜೂನ್ 22ರಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 20 ಕೊನೆ ದಿನ.
‘ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಗೆ ಉದ್ಯೋಗಕ್ಕೆ ಸೇರಿ ಅಮೂಲ್ಯ ಜೀವಗಳನ್ನು ರಕ್ಷಿಸಲು ಇದು ಉತ್ತಮ ಅವವಕಾಶ’ ಎಂದು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಮಹಾ ನಿರ್ದೇಶಕರು ತಿಳಿಸಿದ್ದಾರೆ.