ಹಾಸನ: ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು ಹಾಗೂ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಸಮರ ತಾರಕಕ್ಕೇರಿದ್ದು ಸಿಂಧೂರಿ ವಿರುದ್ದ ಮುಖ್ಯ ಚುನಾವಣಾಧಿಕಾರಿಗೆ ಎ.ಮಂಜು ಪತ್ರ ಬರೆದಿದ್ದಾರೆ.
ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಝಾ ಅವರಿಗೆ 6 ಪುಟಗಳ ಪತ್ರ ಬರೆದಿದ್ದಾರೆ.
ನಾನು ನೀತಿ ಸಂಹಿತೆ ಉಲ್ಲಂಘನೆ ಮಾಡಿಲ್ಲ ಆದರೂ ಎಫ್ಐಆರ್ ದಾಖಲು ಮಾಡಲಾಗಿದೆ. ಡಿಸಿ ಅವರ ದುರುದ್ದೇಶದ ನಡೆಯಿಂದ ನನಗೆ ನೋವಾಗಿದೆ ಎಂದು ಮಂಜು ಪತ್ರದಲ್ಲಿ ತಿಳಿಸಿದ್ದಾರೆ.
ಜಿಲ್ಲಾ ಚನಾವಣಾಧಿಕಾರಿ ಬದಲಿಸುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.