ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: ಒಂದೇ ದಿನ 515 ಪ್ರಕರಣ, ಉಡುಪಿ ಹೆಚ್ಚು ಬಾಧಿತ

Last Updated 5 ಜೂನ್ 2020, 20:24 IST
ಅಕ್ಷರ ಗಾತ್ರ

ಬೆಂಗಳೂರು: ಉಡುಪಿಯಲ್ಲಿ 204 ಜನರಲ್ಲಿ ಸೋಂಕು ದೃಢಪಟ್ಟಿರುವುದು ಸೇರಿದಂತೆ ರಾಜ್ಯದಲ್ಲಿ ಶುಕ್ರವಾರ 515 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಈವರೆಗೆ ಒಂದು ದಿನ ವರದಿಯಾದ ಗರಿಷ್ಠ ಪ್ರಕರಣಗಳು ಇವಾಗಿದ್ದು, ಕೊರೊನಾ ಸೋಂಕಿತರ ಸಂಖ್ಯೆ 4,835ಕ್ಕೆ ಮುಟ್ಟಿದೆ.

ರಾಜ್ಯದಲ್ಲಿ ಕೇವಲ 48 ಗಂಟೆಗಳಲ್ಲಿ 772 ಮಂದಿಗೆ ಸೋಂಕು ತಗುಲಿರುವುದು ಆತಂಕಕ್ಕೆ ಕಾರಣವಾಗಿದೆ. ಹೊಸದಾಗಿ ವರದಿಯಾದ ಪ್ರಕರಣಗಳಲ್ಲಿ 482 ಮಂದಿ ಅನ್ಯ ರಾಜ್ಯಗಳಿಂದ ಬಂದವರಾಗಿದ್ದಾರೆ. ಇದರಿಂದಾಗಿ ಈವರೆಗೆ ವರದಿಯಾದ ಒಟ್ಟು ಪ್ರಕರಣಗಳಲ್ಲಿ 2,785 ಮಂದಿ ಮಹಾರಾಷ್ಟ್ರದ ನಂಟು ಹೊಂದಿದ್ದಾರೆ. ರಾಜ್ಯದಲ್ಲಿ ಕೋವಿಡ್ ಮೊದಲ ಪ್ರಕರಣ ಪತ್ತೆಯಾಗಿ ಮೂರು ತಿಂಗಳು ಕಳೆಯುವಷ್ಟರಲ್ಲೇ 5 ಸಾವಿರದ ಗಡಿ ಸಮೀಪಿಸಿದೆ.

ಉಡುಪಿಯಲ್ಲಿ 204, ಯಾದಗಿರಿಯಲ್ಲಿ 74, ವಿಜಯಪುರದಲ್ಲಿ 53, ಕಲಬುರ್ಗಿಯಲ್ಲಿ 42, ಬೀದರ್‌ನಲ್ಲಿ 39, ಬೆಳಗಾವಿಯಲ್ಲಿ 36, ಮಂಡ್ಯದಲ್ಲಿ 13, ಬೆಂಗಳೂರು ಗ್ರಾಮಾಂತರದಲ್ಲಿ 12, ಬೆಂಗಳೂರಿನಲ್ಲಿ 10, ದಕ್ಷಿಣ ಕನ್ನಡದಲ್ಲಿ 8, ಉತ್ತರ ಕನ್ನಡದಲ್ಲಿ 7, ಹಾಸನದಲ್ಲಿ 3, ಚಿಕ್ಕಬಳ್ಳಾಪುರದಲ್ಲಿ 3, ಧಾರವಾಡದಲ್ಲಿ 3, ಹಾವೇರಿಯಲ್ಲಿ 2, ರಾಮನಗರದಲ್ಲಿ 2 ಹಾಗೂ ಕೋಲಾರ, ಬಳ್ಳಾರಿ, ಬಾಗಲಕೋಟೆ, ದಾವಣಗೆರೆಯಲ್ಲಿ ತಲಾ ಒಂದು ಪ್ರಕರಣ ವರದಿಯಾಗಿದೆ. 83 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.

ಉಡುಪಿಯಲ್ಲಿ ವರದಿಯಾದ ಪ್ರಕರಣಗಳಲ್ಲಿ 203 ಮಂದಿ ಮುಂಬೈನಿಂದ ಬಂದವರಾಗಿದ್ದಾರೆ. ಚೆಕ್‌ಪೋಸ್ಟ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಯೊಬ್ಬರು ಕೂಡ ಸೋಂಕಿತರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT