ಬೆಂಗಳೂರು: ‘ಕೃಷಿ ಉತ್ಪನ್ನ ಮಾರುಕಟ್ಟೆ ತಿದ್ದುಪಡಿ ಕಾಯ್ದೆಯಿಂದ ವ್ಯಾಪಾರಸ್ಥರಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಭಯ ನೀಡಿದ್ದಾರೆ. ಈ ಕಾಯ್ದೆಯನ್ನುಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್ಕೆಸಿಸಿಐ) ಸ್ವಾಗತಿಸುತ್ತದೆ’ ಎಂದು ಸಂಸ್ಥೆಯ ಅಧ್ಯಕ್ಷ ಜಿ.ಆರ್. ಜನಾರ್ದನ ಹೇಳಿದ್ದಾರೆ.