ಬೆಂಗಳೂರು: ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಭಾನುವಾರ ಧ್ವಜಾರೋಹಣದ ನಂತರ ರಾಷ್ಟ್ರಗೀತೆ ಮೊಳಗು
ತ್ತಿದ್ದಂತೆ, ಹೆಲಿಕಾಪ್ಟರ್ ಮೂಲಕ ರಾಷ್ಟ್ರಧ್ವಜಕ್ಕೆ ಪುಷ್ಪವೃಷ್ಟಿ ಮಾಡಲಾಯಿತು. ಆದರೆ, ಈ ವೇಳೆ ಸೇನಾ ಹೆಲಿಕಾಪ್ಟರ್ ಅತಿ ಕಡಿಮೆ ಎತ್ತರದಲ್ಲಿ ಹಾರಾಟ ನಡೆಸಿದ್ದರಿಂದ ಮೈದಾನ ದೂಳುಮಯವಾಯಿತು. ರಾಜ್ಯಪಾಲ ವಜುಭಾಯಿ ವಾಲಾ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಇತರೆ ಗಣ್ಯರ ಮೇಲೆ ಮಾತ್ರವಲ್ಲದೆ, ಸಾರ್ವಜನಿಕರ ಮೇಲೂ ದೂಳು ಹಾರಿತು.