‘ಜಿಲ್ಲೆಯ ಅಥಣಿ, ಕಾಗವಾಡ, ಚಿಕ್ಕೋಡಿ, ಖಾನಾಪುರ, ರಾಯಬಾಗ, ಹುಕ್ಕೇರಿ, ಮೂಡಲಗಿ, ಗೋಕಾಕ, ಖಾನಾಪುರ, ಬೆಳಗಾವಿ, ಮೂಡಲಗಿ, ಸವದತ್ತಿ, ಚನ್ನಮ್ಮನ ಕಿತ್ತೂರು, ನಿಪ್ಪಾಣಿ ತಾಲೂಕುಗಳಲ್ಲಿ ಒಟ್ಟಾರೆ 374 ಗ್ರಾಮಗಳು ಪ್ರವಾಹದಿಂದ ತೊಂದರೆಗೆ ಒಳಗಾಗಿವೆ. ಇದುವರೆಗೆ ಪ್ರವಾಹದಲ್ಲಿ 13 ಜನರು ಪ್ರಾಣ ಕಳೆದುಕೊಂಡಿದ್ದು, ನಾಲ್ವರು ಕಾಣೆಯಾಗಿದ್ದಾರೆ. ಒಟ್ಟು 4,14,411 ಜನ ನೆರೆಪೀಡಿತರಾಗಿದ್ದಾರೆ. ಧಾರಾಕಾರ ಮಳೆಯಿಂದಾಗಿ ಒಟ್ಟು 15,400 ಮನೆಗಳಿಗೆ ಭಾಗಶ: ಹಾನಿಗೆ ಒಳಗಾಗಿವೆ. 723 ಮನೆಗಳು ಸಂಪೂರ್ಣವಾಗಿ ಕುಸಿದಿವೆ. ಒಟ್ಟು 14 ತಾಲ್ಲೂಕುಗಳಲ್ಲಿ 491 ಪರಿಹಾರ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಅವುಗಳಲ್ಲಿ 1,84,966 ಜನರು ಆಶ್ರಯ ಪಡೆದಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.