ಜಿಲ್ಲೆಯಲ್ಲಿ ಈಗಾಗಲೇ 4 ಅಗ್ನಿಶಾಮಕ ಠಾಣೆಗಳು ಮಡಿಕೇರಿ, ಗೋಣಿಕೊಪ್ಪಲು, ಸೋಮವಾರಪೇಟೆ ಮತ್ತು ಕುಶಾಲನಗರದಲ್ಲಿ ಕಾರ್ಯನಿರ್ವಹಿಸುತ್ತಿವೆ. ಇಲಾಖೆಯಿಂದ ಮತ್ತು ಜಿಲ್ಲಾಡಳಿತದಿಂದ ಬೋಟ್ಗಳು, ಲೈಫ್ ಜಾಕೆಟ್ಗಳು ಸೇರಿದಂತೆ ಅವಶ್ಯ ರಕ್ಷಣಾ ಸಾಮಗ್ರಿಗಳನ್ನು ಒದಗಿಸಲಾಗಿದೆ. ಕಳೆದ 2 ವರ್ಷಗಳ ಅನುಭವದಿಂದ ಈ ಬಾರಿ ಪ್ರವಾಹ ಪರಿಸ್ಥಿತಿ ಉಂಟಾಗುವ ಮೊದಲೇ ಜನರ ಸ್ಥಳಾಂತಕ್ಕೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಸಿಬ್ಬಂದಿಗೆ ತರಬೇತಿ ನೀಡಲಾಗಿದೆ. ಪ್ರವಾಹ ಸಂದರ್ಭದಲ್ಲಿ ನೀರಿನಲ್ಲಿ ಇಳಿದು ಕಾರ್ಯನಿರ್ವಹಿಸಲು ಲೈಫ್ ಜಾಕೆಟ್ಗಳನ್ನೂ ಒದಗಿಸಲಾಗಿದೆ ಎಂದು ತಿಳಿಸಿದ್ದಾರೆ.