<p><strong>ಗಂಗಾವತಿ (ಕೊಪ್ಪಳ ಜಿಲ್ಲೆ):</strong> ತುಂಗಭದ್ರಾ ಜಲಾಶಯಕ್ಕೆ ಅಧಿಕ ಪ್ರಮಾಣದ ನೀರು ಹರಿದು ಬರುತ್ತಿದ್ದು, ಹೆಚ್ಚುವರಿ ನೀರನ್ನು ನದಿಗೆ ಹರಿಸಲಾಗುತ್ತಿದೆ. ನದಿ ಪಾತ್ರದಲ್ಲಿರುವ ಗ್ರಾಮಗಳಲ್ಲಿ ತಾಲ್ಲೂಕು ಆಡಳಿತ ಸೋಮವಾರ ‘ರೆಡ್ ಅಲರ್ಟ್’ ಘೋಷಣೆ ಮಾಡಿದೆ.</p>.<p>ಜಲಾಶಯದಿಂದ ಮೊದಲ ಹಂತವಾಗಿ 35,829 ಕ್ಯುಸೆಕ್ ನೀರು ಹೊರ ಬಿಡಲಾಗುತ್ತಿತ್ತು. ಎರಡನೇ ಹಂತದಲ್ಲಿ ಇನ್ನೂ ಏರಿಕೆ ಮಾಡಿ 46,000 ಕ್ಯುಸೆಕ್ಗಿಂತ ಅಧಿಕ ನೀರು ಬಿಟ್ಟಿದ್ದರಿಂದ ಅಪಾಯಕಾರಿ ಪ್ರಮಾಣದಲ್ಲಿ ನೀರು ನದಿಯಲ್ಲಿ ಹರಿಯುತ್ತಿದೆ.</p>.<p>ವಿರುಪಾಪುರ ಗಡ್ಡೆಯು ಪುನಃ ಸಂಪರ್ಕ ಕಳೆದುಕೊಂಡಿದೆ. ವಿದೇಶಿ ಪ್ರವಾಸಿಗರನ್ನು ಸುರಕ್ಷಿತ ಸ್ಥಳಗಳ ಕಡೆಗೆ ಕಳುಹಿಸಲಾಗಿದೆ. ಆನೆಗೊಂದಿ ಸಮೀಪದ ತಳವಾರ ಘಟ್ಟದಲ್ಲಿರುವ ಗಣೇಶ ದೇವಸ್ಥಾನ, 64 ಕಂಬಗಳ ಮಂಟಪ ಸೇರಿದಂತೆ ವಿಜಯನಗರ ಕಾಲದ ನಾನಾ ಮಂಟಪಗಳು ಜಲಾವೃತಗೊಂಡಿವೆ.</p>.<p class="Subhead">ಕುಷ್ಟಗಿ ವರದಿ:ತಾಲ್ಲೂಕಿನಲ್ಲಿ ವ್ಯಾಪಕ ಮಳೆಯಾಗಿದ್ದರಿಂದ 300 ಮನೆಗಳು ಭಾಗಶಃ ಬಿದ್ದಿವೆ. ಮುದೇನೂರು ಬನ್ನಟ್ಟಿ ನಡುವಿನ ತಾತ್ಕಾಲಿಕ ಸೇತುವೆ ಕೊಚ್ಚಿಹೋಗಿದ್ದು ಸಂಪರ್ಕ ಕಡಿತಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ (ಕೊಪ್ಪಳ ಜಿಲ್ಲೆ):</strong> ತುಂಗಭದ್ರಾ ಜಲಾಶಯಕ್ಕೆ ಅಧಿಕ ಪ್ರಮಾಣದ ನೀರು ಹರಿದು ಬರುತ್ತಿದ್ದು, ಹೆಚ್ಚುವರಿ ನೀರನ್ನು ನದಿಗೆ ಹರಿಸಲಾಗುತ್ತಿದೆ. ನದಿ ಪಾತ್ರದಲ್ಲಿರುವ ಗ್ರಾಮಗಳಲ್ಲಿ ತಾಲ್ಲೂಕು ಆಡಳಿತ ಸೋಮವಾರ ‘ರೆಡ್ ಅಲರ್ಟ್’ ಘೋಷಣೆ ಮಾಡಿದೆ.</p>.<p>ಜಲಾಶಯದಿಂದ ಮೊದಲ ಹಂತವಾಗಿ 35,829 ಕ್ಯುಸೆಕ್ ನೀರು ಹೊರ ಬಿಡಲಾಗುತ್ತಿತ್ತು. ಎರಡನೇ ಹಂತದಲ್ಲಿ ಇನ್ನೂ ಏರಿಕೆ ಮಾಡಿ 46,000 ಕ್ಯುಸೆಕ್ಗಿಂತ ಅಧಿಕ ನೀರು ಬಿಟ್ಟಿದ್ದರಿಂದ ಅಪಾಯಕಾರಿ ಪ್ರಮಾಣದಲ್ಲಿ ನೀರು ನದಿಯಲ್ಲಿ ಹರಿಯುತ್ತಿದೆ.</p>.<p>ವಿರುಪಾಪುರ ಗಡ್ಡೆಯು ಪುನಃ ಸಂಪರ್ಕ ಕಳೆದುಕೊಂಡಿದೆ. ವಿದೇಶಿ ಪ್ರವಾಸಿಗರನ್ನು ಸುರಕ್ಷಿತ ಸ್ಥಳಗಳ ಕಡೆಗೆ ಕಳುಹಿಸಲಾಗಿದೆ. ಆನೆಗೊಂದಿ ಸಮೀಪದ ತಳವಾರ ಘಟ್ಟದಲ್ಲಿರುವ ಗಣೇಶ ದೇವಸ್ಥಾನ, 64 ಕಂಬಗಳ ಮಂಟಪ ಸೇರಿದಂತೆ ವಿಜಯನಗರ ಕಾಲದ ನಾನಾ ಮಂಟಪಗಳು ಜಲಾವೃತಗೊಂಡಿವೆ.</p>.<p class="Subhead">ಕುಷ್ಟಗಿ ವರದಿ:ತಾಲ್ಲೂಕಿನಲ್ಲಿ ವ್ಯಾಪಕ ಮಳೆಯಾಗಿದ್ದರಿಂದ 300 ಮನೆಗಳು ಭಾಗಶಃ ಬಿದ್ದಿವೆ. ಮುದೇನೂರು ಬನ್ನಟ್ಟಿ ನಡುವಿನ ತಾತ್ಕಾಲಿಕ ಸೇತುವೆ ಕೊಚ್ಚಿಹೋಗಿದ್ದು ಸಂಪರ್ಕ ಕಡಿತಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>