ಮಹಾರಾಷ್ಟ್ರದ ಕೊಯ್ನಾ, ವಾರಣಾ, ಧೂಮ್, ಕನೇರ್ ಜಲಾಶಯಗಳಿಂದ 93,262 ಕ್ಯುಸೆಕ್, ರಾಧಾನಗರಿ ಮತ್ತಿತರ ಜಲಾಶಯಗಳಿಂದ 17ಸಾವಿರ, ಕಾಳಮ್ಮವಾಡಿ, ಪಾಟಗಾಂವ್ ಡ್ಯಾಂಗಳಿಂದ 15ಸಾವಿರ ಕ್ಯುಸೆಕ್ ನೀರು ಕೃಷ್ಣಾ ನದಿ ಸೇರುತ್ತಿದೆ. ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲ್ಲೂಕಿನಲ್ಲಿ ಕೃಷ್ಣಾ, ದೂಧ್ಗಂಗಾ ಹಾಗೂ ವೇದಗಂಗಾ ನದಿಗಳಿಗೆ ಕಟ್ಟಿರುವ 6 ಸೇತುವೆಗಳು, ರಾಯಬಾಗ ತಾಲ್ಲೂಕಿನ ಕುಡಚಿ ಸೇತುವೆ ಮುಳುಗಡೆ ಸ್ಥಿತಿಯಲ್ಲಿಯೇ ಇವೆ. ದೂಧ್ಗಂಗಾ ಮತ್ತು ವೇದಗಂಗಾ ನದಿಗಳ ಒಳಹರಿವಿನಲ್ಲಿ ಏರಿಕೆ ದಾಖಲಾಗುತ್ತಿದೆ. ನದಿ ದಂಡೆಯ ಜನರು, ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುತ್ತಿದ್ದಾರೆ. ಚಿಕ್ಕೋಡಿ ಪರಿಸರದಲ್ಲೂ ಆಗಾಗ ಮಳೆಯಾಯಿತು.