ಇನ್ನೊಂದೆಡೆ ಕಂಪ್ಲಿ–ಗಂಗಾವತಿ ಸೇತುವೆ ಮುಳುಗಿದ್ದು, ಬೀದರ್, ಕಲಬುರ್ಗಿ, ರಾಯಚೂರು, ಆಂಧ್ರ ಪ್ರದೇಶ ಮತ್ತು ತೆಲಂಗಾಣದ ಅನೇಕ ನಗರಗಳಿಗೆ ಸಂಪರ್ಕ ಕಡಿತಗೊಂಡಿದೆ. ತಾಲ್ಲೂಕಿನ ಹಂಪಿ ಪುರಂದರ ಮಂಟಪ, ವಿಜಯನಗರದ ಕಾಲು ಸೇತುವೆ, ಚಕ್ರತೀರ್ಥ ಇನ್ನೂ ನೀರಿನಲ್ಲೇ ಇವೆ.
ಭಾರಿ ಮಳೆಗೆ ಹೂವಿನಹಡಗಲಿ ತಾಲ್ಲೂಕಿನಲ್ಲಿ 67 ಮನೆಗಳು ಕುಸಿದಿವೆ. ನೂರಾರು ಎಕರೆ ಮೆಕ್ಕೆಜೋಳ ಹಾಳಾಗಿದೆ. ತಾಲ್ಲೂಕಿನ ಬೂದನೂರು ಕೆರೆ ಒಡೆದು ಹೋಗಿದೆ.