ಕಳೆದ 10 ದಿನಗಳಿಂದ ಜಲಾವೃತಗೊಂಡಿದ್ದ ಅಥಣಿ ತಾಲ್ಲೂಕಿನ ದರೂರು ಸೇತುವೆ ಸಂಚಾರಕ್ಕೆ ಮುಕ್ತವಾಗಿದೆ. ಆದರೆ, ರಸ್ತೆ ತುಂಬಾ ಹಾಳಾಗಿದ್ದರಿಂದ ಕೇವಲ ಲಘು ವಾಹನಗಳಿಗೆ ಮಾತ್ರ ಸಂಚರಿಸಲು ಅವಕಾಶ ನೀಡಲಾಗಿದೆ. ಬಸ್, ಲಾರಿ ಸೇರಿದಂತೆ ಭಾರಿ ವಾಹನಗಳ ಸಂಚಾರಕ್ಕೆ ಇನ್ನೂ ಅನುಮತಿ ದೊರೆತಿಲ್ಲ. ರಾಯಬಾಗ ತಾಲ್ಲೂಕಿನ ಕುಡಚಿ ಹಾಗೂ ಚಿಂಚಲಿ– ಹಾಲಹಳ್ಳಿ ಸೇತುವೆಗಳೂ ಮುಕ್ತವಾಗಿವೆ. ಲಘು ವಾಹನಗಳು ಮಾತ್ರ ಸಂಚರಿಸುತ್ತಿವೆ.