ತುಮಕೂರು ಜಿಲ್ಲೆ ಪಾವಗಡದ ರವಿಕುಮಾರ್ ಅವರು ಮೈಸೂರಿನ ಎಂಐಟಿಯಲ್ಲಿ ಉದ್ಯೋಗಿಯಾಗಿದ್ದರು. ಎಬಿವಿಪಿ ಕಾರ್ಯಕರ್ತರಾಗಿದ್ದ ಅವರು, ಮೈಸೂರಿನಲ್ಲಿ ಸಾಮಗ್ರಿಗಳನ್ನು ಸಂಗ್ರಹಿಸಿ, ಶನಿವಾರ ರಾತ್ರಿ ಅಲ್ಲಿಂದ ಹೊರಟು, ತಾಲ್ಲೂಕಿನ ಕಿರವತ್ತಿಯಲ್ಲಿರುವ ತಾತ್ಕಾಲಿಕ ಪುನರ್ವಸತಿ ಕೇಂದ್ರದಲ್ಲಿ ಅವನ್ನು ವಿತರಿಸಿ ವಾಪಸ್ಸಾಗುತ್ತಿರುವಾಗ ಅಪಘಾತ ಸಂಭವಿಸಿದೆ. ಅಪಘಾತದ ವೇಳೆ ಅವರೇ ಕಾರು ಚಾಲನೆ ಮಾಡುತ್ತಿದ್ದರು.