ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೆರೆ ಪರಿಹಾರ ಕಾರ್ಯಗಳಿಗೆ ಎರಡನೇ ಕಂತಿನ ನೆರವು: ರಾಜ್ಯಕ್ಕೆ ₹669 ಕೋಟಿ!

Last Updated 7 ಜನವರಿ 2020, 20:19 IST
ಅಕ್ಷರ ಗಾತ್ರ

ಬೆಂಗಳೂರು: ಕಂಡು ಕೇಳರಿಯದ ನೆರೆಗೆ ತುತ್ತಾಗಿರುವ ರಾಜ್ಯಕ್ಕೆ ಕೇಂದ್ರ ಸರ್ಕಾರ ಎರಡನೇ ಕಂತಿನಲ್ಲಿ ಬಿಡುಗಡೆ ಮಾಡಿರುವ ಪರಿಹಾರ ಮೊತ್ತ ಕೇವಲ ₹669.85 ಕೋಟಿ!

ಎರಡನೇ ಕಂತಿನಲ್ಲಿ ₹1,869.85 ಕೋಟಿ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಸರ್ಕಾರ
ಸೋಮವಾರ ತಿಳಿಸಿತ್ತು.

‘ಮೊದಲ ಕಂತಿನಲ್ಲಿ ₹1,200 ಕೋಟಿ ಬಿಡುಗಡೆಯಾಗಿದ್ದು, ಈಗ ₹669.85 ಕೋಟಿ ಮಾತ್ರ ನೀಡಲಾಗಿದೆ. ಎರಡೂ ಕಂತಿನ ಹಣ ಸೇರಿದರೆ ಕೇಂದ್ರ ಸರ್ಕಾರ ಸೋಮವಾರ ಬಿಡುಗಡೆ ಮಾಡಿದೆ ಎಂದು ಹೇಳಲಾಗಿರುವ ಮೊತ್ತಕ್ಕೆ ಸಮನಾಗಿರುತ್ತದೆ’ ಎಂದು ಕಂದಾಯ ಇಲಾಖೆ ಹಿರಿಯ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.

ಹಣ ಸಾಲದು:‘ಪ್ರಧಾನಿ ಮೋದಿ ರಾಜ್ಯಕ್ಕೆ ಬಂದುಹೋದ ತಕ್ಷಣ ಪರಿಹಾರ ಬಿಡುಗಡೆಯಾಗಿದೆ.ಮೊದಲ ಕಂತು ಸೇರಿದಂತೆ ಒಟ್ಟು ₹3,069.85 ಕೋಟಿ ಬಿಡುಗಡೆ ಮಾಡಿದೆ. ಈಗ ಬಿಡುಗಡೆಯಾಗಿರುವ ಹಣ ಸಾಕಾಗುವುದಿಲ್ಲ. ಮುಂದಿನ ದಿನಗಳಲ್ಲಿ ಮತ್ತಷ್ಟು ಪರಿಹಾರವನ್ನು ಬಿಡುಗಡೆ ಮಾಡಲಿದೆ’ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಟೀಕೆ: ಅಧಿಕಾರಕ್ಕೆ ಬಂದು 24 ಗಂಟೆಯಲ್ಲಿ ಸಾಲ ಮನ್ನಾ ಮಾಡಲಾಗುವುದು ಎಂದು ಪ್ರಮಾಣ ಮಾಡಿದ ‘ಸಾಂದರ್ಭಿಕ ಶಿಶು’ ಹಿಂಬಾಗಿಲಿನಿಂದ ಮುಖ್ಯಮಂತ್ರಿಯಾದರೂ ರೈತರ ಕೈ ಹಿಡಿಯಲಿಲ್ಲ ಎಂದು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

‘ಅರೆಕಾಸಿನ ಮಜ್ಜಿಗೆ’

ಕೇಂದ್ರ ಸರ್ಕಾರ ನೀಡಿರುವ ₹669 ಕೋಟಿ ಹೆಚ್ಚುವರಿ ಪರಿಹಾರ, ‘ರಾವಣನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ‘ಸುಳ್ಳು ದೇವರ ಭಕ್ತರಾದ ಬಿಜೆಪಿ ನಾಯಕರು, ಪರಿಹಾರದ ಮೊತ್ತ ₹1,200 ಕೋಟಿ ಹಾಗೂ ₹1,869 ಕೋಟಿ ಸೇರಿ ₹3,069 ಕೋಟಿ ಎಂದು ಹೇಳಿಕೊಂಡು ಸಂಭ್ರಮಿಸುತ್ತಿರುವುದು ತಮಾಷೆಯಾಗಿದೆ’ ಎಂದು ಕುಟುಕಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT