ಹಿರಿಯೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರವಾಹ ಪರಿಸ್ಥಿತಿಯಿಂದ ಉಂಟಾಗಿರುವ ನಷ್ಟವನ್ನು ರಾಜ್ಯ ಸರ್ಕಾರ ಅಂದಾಜು ಮಾಡಿ ಕೇಂದ್ರಕ್ಕೆ ವರದಿ ಕಳುಹಿಸಿತ್ತು. ಅಂದಾಜು ₹ 3,500 ಕೋಟಿ ನೀಡುವಂತೆ ಕೇಳಿಕೊಂಡಿದೆ. ಈಗಾಗಲೇ ಪರಿಹಾರ ಮಂಜೂರು ಆಗಬೇಕಿತ್ತು. ಮಂಜೂರಾತಿಯಲ್ಲಿ ಆಗುತ್ತಿರುವ ವಿಳಂಬಕ್ಕೆ ಜನರ ಕ್ಷಮೆ ಯಾಚಿಸುತ್ತೇನೆ’ ಎಂದು ಹೇಳಿದರು.