ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ನೆರೆ: ವೈಮಾನಿಕ ಸಮೀಕ್ಷೆಗೆ ಹೇಳುವೆ’

Last Updated 6 ಆಗಸ್ಟ್ 2019, 19:33 IST
ಅಕ್ಷರ ಗಾತ್ರ

ಬೆಂಗಳೂರು: ‘ಉತ್ತರ ಕರ್ನಾಟಕದಲ್ಲಿ ನೆರೆ ಹಾವಳಿಯಿಂದ ಆಗಿರುವ ಹಾನಿಯ ಬಗ್ಗೆ ವೈಮಾನಿಕ ಸಮೀಕ್ಷೆ ನಡೆಸಲು ಎಚ್‌.ಡಿ.ಕುಮಾರಸ್ವಾಮಿಗೆ ಹೇಳುವೆ. ಸದ್ಯ ಆವರಿಗೆ ಆರೋಗ್ಯ ಸರಿ ಇಲ್ಲ’ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಹೇಳಿದರು.

‘ನಾನು ಹೋಗಿ ನೆರೆ ಪರಿಸ್ಥಿತಿ ನೋಡಿದರೆ ವಿಧಾನಸಭೆಯಲ್ಲಿ ಅದನ್ನು ಹೇಳುವುದು ಸಾಧ್ಯವಾಗುವುದಿಲ್ಲ. ಹೀಗಾಗಿ ಅವರೇ ಹೋಗಿ ಬರಬೇಕು’ ಎಂದು ಮಂಗಳವಾರ ಇಲ್ಲಿ ಪಕ್ಷದ ಪರಿಶಿಷ್ಟ ಜಾತಿ, ಪಂಗಡದ ಘಟಕದ ಸಭೆ ಬಳಿಕ ಸುದ್ದಿಗಾರರಿಗೆ ತಿಳಿಸಿದರು.

‘ದಲಿತ ಸಮುದಾಯವನ್ನೇ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿ ಮಾಡಲಾಗಿದೆ. ದಲಿತರು, ಹಿಂದುಳಿದ
ವರು, ಅಲ್ಪಸಂಖ್ಯಾತರ ಪರ ಪಕ್ಷ ಈ ಮೊದಲಿನಿಂದಲೂ ಹೋರಾಡುತ್ತಿದೆ. ಬುಧವಾರ ನಡೆಯುವ ಪಕ್ಷದ ಸಮಾವೇಶದಲ್ಲಿ ಮುಂದಿನ ಕಾರ್ಯಕ್ರಮ ಪ್ರಕಟಿಸಲಿದ್ದೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT