ಕಳೆದ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ಮಲಪ್ರಭಾ ನದಿಯಲ್ಲಿ ನೆರೆಯಿಂದಾಗಿ ಪ್ರವಾಸಿ ಸ್ಮಾರಕಗಳಿಗೆ ನೀರು ನುಗ್ಗಿ ಅಸ್ತವ್ಯಸ್ತವಾಗಿತ್ತು. ಪಟ್ಟದಕಲ್ಲು ಮತ್ತು ಐಹೊಳೆ ದೇವಾಲಯಗಳು ಸಂಪೂರ್ಣ ಜಲಾವೃತವಾಗಿದ್ದವು. ಸ್ಮಾರಕಗಳನ್ನು ಸಂಪರ್ಕಿಸುವ ರಸ್ತೆಗಳೂ ಕೊಚ್ಚಿಹೋಗಿದ್ದವು. ಬಾದಾಮಿ–ಪಟ್ಟದಕಲ್ಲು–ಐಹೊಳೆ ಸಂಪರ್ಕಿಸುವ ರಾಜ್ಯ ಹೆದ್ದಾರಿ ಪಟ್ಟದಕಲ್ಲು ಬಳಿ ಪ್ರವಾಹದ ಸೆಳೆತದಲ್ಲಿ ಕೊಚ್ಚಿ ಹೋಗಿದ್ದು, ಇನ್ನೂ ದುರಸ್ತಿಯಾಗಿಲ್ಲ. ಪ್ರವಾಸಿಗರು ಪರ್ಯಾಯ ರಸ್ತೆ ಬಳಸುತ್ತಿದ್ದಾರೆ.ಮಹಾಕೂಟ, ನಾಗನಾಥನಕೊಳ್ಳ ಮತ್ತು ಹುಲಿಗೆಮ್ಮನಕೊಳ್ಳದಲ್ಲೂ ಈ ವರ್ಷ ಪ್ರವಾಸಿಗರ ಸಂಖ್ಯೆ ಇಳಿಮುಖವಾಗಿದೆ.