<p><strong>ಬೆಂಗಳೂರು:</strong> ಶಾಸಕ ಅರವಿಂದ ಲಿಂಬಾವಳಿ ಅವರಿಗೆ ಬ್ಲ್ಯಾಕ್ಮೇಲ್ ಮಾಡಿದ್ದ ಆರೋಪದಡಿ ಸಿಸಿಬಿ ಪೊಲೀಸರು ಬಂಧಿಸಿರುವ‘ಫೋಕಸ್’ ಸುದ್ದಿವಾಹಿನಿ ವ್ಯವಸ್ಥಾಪಕ ನಿರ್ದೇಶಕ (ಎಂ.ಡಿ) ಹೇಮಂತ್ಕುಮಾರ್ ಕಮ್ಮಾರ, ಆರೋಗ್ಯ ಸಚಿವ ಶಿವಾನಂದ ಪಾಟೀಲರಿಗೂ ಬ್ಲ್ಯಾಕ್ಮೇಲ್ ಮಾಡಿದ್ದ ಸಂಗತಿ ಗೊತ್ತಾಗಿದೆ.</p>.<p>‘ಸಚಿವರು ಹಾಗೂ ಅವರ ಆಪ್ತ ಸಹಾಯಕರು, ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗಾವಣೆಗೆ ಲಂಚ ಪಡೆಯುತ್ತಿದ್ದಾರೆಂದು ಬಿಂಬಿಸುವ ರೀತಿಯಲ್ಲಿ ಹೇಮಂತ್ಕುಮಾರ್ ಆಡಿಯೊ ಸೃಷ್ಟಿಸಿದ್ದರು. ಅದನ್ನು ಆಪ್ತ ಸಹಾಯಕರಿಗೆ ಕಳುಹಿಸಿ ಲಕ್ಷಾಂತರ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಈ ವಿಷಯವನ್ನು ಸಚಿವರ ಆಪ್ತರೇ ನಮಗೆ ತಿಳಿಸಿದ್ದಾರೆ’ ಎಂದು ಸಿಸಿಬಿ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ಹೇಳಿದರು.</p>.<p>‘ಹೇಮಂತ್ ಬಂಧನದ ಸುದ್ದಿ ತಿಳಿದು ಸೋಮವಾರ ಕಚೇರಿಗೆ ಬಂದಿದ್ದ ಸಚಿವರ ಆಪ್ತರು, ಬ್ಲ್ಯಾಕ್ಮೇಲ್ ಬಗ್ಗೆ ಮಾಹಿತಿ ನೀಡಿದ್ದಾರೆ. ಯಶವಂತಪುರ ಠಾಣೆಗೆ ದೂರು ನೀಡುವಂತೆ ಹೇಳಿ ಕಳುಹಿಸಲಾಗಿದೆ. ಅಲ್ಲಿ ಎಫ್ಐಆರ್ ದಾಖಲಾದ ನಂತರ, ಪ್ರಕರಣವು ಸಿಸಿಬಿಗೆ ವರ್ಗವಾಗಲಿದೆ’ ಎಂದರು.</p>.<p class="Subhead"><strong>ಸಿಸಿಬಿ ಕಸ್ಟಡಿಗೆ</strong>: ಹೇಮಂತ್ ಕುಮಾರ್ ಅವರನ್ನು ಸೋಮವಾರ ಬೆಳಿಗ್ಗೆ ನಗರದ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಐದು ದಿನಗಳವರೆಗೆ ಸಿಸಿಬಿ ಕಸ್ಟಡಿಗೆ ನೀಡಿತು.</p>.<p class="Subhead"><strong>ವಾಹಿನಿಗಾಗಿ ಸಾಲ:</strong>‘ಕೋಟ್ಯಂತರ ರೂಪಾಯಿ ಖರ್ಚು ಮಾಡಿ ‘ಫೋಕಸ್’ ಸುದ್ದಿವಾಹಿನಿ ಆರಂಭಿಸಿದ್ದೆ. ಈಗ ಒಂದೂವರೆ ಕೋಟಿ ಸಾಲ ನನ್ನ ತಲೆ ಮೇಲಿದೆ. ಸ್ವಂತ ಕಾರು ಮಾರಾಟ ಮಾಡಿ, ‘ಬಾಡಿಗೆ ಕಾರಿನಲ್ಲಿ ಓಡಾಡುತ್ತಿದ್ದೇನೆ’ ಎಂದು ಆರೋಪಿ ಹೇಮಂತ್ ಹೇಳಿಕೆ ನೀಡಿರುವುದಾಗಿ ಸಿಸಿಬಿ ಮೂಲಗಳು ತಿಳಿಸಿವೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಶಾಸಕ ಅರವಿಂದ ಲಿಂಬಾವಳಿ ಅವರಿಗೆ ಬ್ಲ್ಯಾಕ್ಮೇಲ್ ಮಾಡಿದ್ದ ಆರೋಪದಡಿ ಸಿಸಿಬಿ ಪೊಲೀಸರು ಬಂಧಿಸಿರುವ‘ಫೋಕಸ್’ ಸುದ್ದಿವಾಹಿನಿ ವ್ಯವಸ್ಥಾಪಕ ನಿರ್ದೇಶಕ (ಎಂ.ಡಿ) ಹೇಮಂತ್ಕುಮಾರ್ ಕಮ್ಮಾರ, ಆರೋಗ್ಯ ಸಚಿವ ಶಿವಾನಂದ ಪಾಟೀಲರಿಗೂ ಬ್ಲ್ಯಾಕ್ಮೇಲ್ ಮಾಡಿದ್ದ ಸಂಗತಿ ಗೊತ್ತಾಗಿದೆ.</p>.<p>‘ಸಚಿವರು ಹಾಗೂ ಅವರ ಆಪ್ತ ಸಹಾಯಕರು, ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗಾವಣೆಗೆ ಲಂಚ ಪಡೆಯುತ್ತಿದ್ದಾರೆಂದು ಬಿಂಬಿಸುವ ರೀತಿಯಲ್ಲಿ ಹೇಮಂತ್ಕುಮಾರ್ ಆಡಿಯೊ ಸೃಷ್ಟಿಸಿದ್ದರು. ಅದನ್ನು ಆಪ್ತ ಸಹಾಯಕರಿಗೆ ಕಳುಹಿಸಿ ಲಕ್ಷಾಂತರ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಈ ವಿಷಯವನ್ನು ಸಚಿವರ ಆಪ್ತರೇ ನಮಗೆ ತಿಳಿಸಿದ್ದಾರೆ’ ಎಂದು ಸಿಸಿಬಿ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ಹೇಳಿದರು.</p>.<p>‘ಹೇಮಂತ್ ಬಂಧನದ ಸುದ್ದಿ ತಿಳಿದು ಸೋಮವಾರ ಕಚೇರಿಗೆ ಬಂದಿದ್ದ ಸಚಿವರ ಆಪ್ತರು, ಬ್ಲ್ಯಾಕ್ಮೇಲ್ ಬಗ್ಗೆ ಮಾಹಿತಿ ನೀಡಿದ್ದಾರೆ. ಯಶವಂತಪುರ ಠಾಣೆಗೆ ದೂರು ನೀಡುವಂತೆ ಹೇಳಿ ಕಳುಹಿಸಲಾಗಿದೆ. ಅಲ್ಲಿ ಎಫ್ಐಆರ್ ದಾಖಲಾದ ನಂತರ, ಪ್ರಕರಣವು ಸಿಸಿಬಿಗೆ ವರ್ಗವಾಗಲಿದೆ’ ಎಂದರು.</p>.<p class="Subhead"><strong>ಸಿಸಿಬಿ ಕಸ್ಟಡಿಗೆ</strong>: ಹೇಮಂತ್ ಕುಮಾರ್ ಅವರನ್ನು ಸೋಮವಾರ ಬೆಳಿಗ್ಗೆ ನಗರದ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಐದು ದಿನಗಳವರೆಗೆ ಸಿಸಿಬಿ ಕಸ್ಟಡಿಗೆ ನೀಡಿತು.</p>.<p class="Subhead"><strong>ವಾಹಿನಿಗಾಗಿ ಸಾಲ:</strong>‘ಕೋಟ್ಯಂತರ ರೂಪಾಯಿ ಖರ್ಚು ಮಾಡಿ ‘ಫೋಕಸ್’ ಸುದ್ದಿವಾಹಿನಿ ಆರಂಭಿಸಿದ್ದೆ. ಈಗ ಒಂದೂವರೆ ಕೋಟಿ ಸಾಲ ನನ್ನ ತಲೆ ಮೇಲಿದೆ. ಸ್ವಂತ ಕಾರು ಮಾರಾಟ ಮಾಡಿ, ‘ಬಾಡಿಗೆ ಕಾರಿನಲ್ಲಿ ಓಡಾಡುತ್ತಿದ್ದೇನೆ’ ಎಂದು ಆರೋಪಿ ಹೇಮಂತ್ ಹೇಳಿಕೆ ನೀಡಿರುವುದಾಗಿ ಸಿಸಿಬಿ ಮೂಲಗಳು ತಿಳಿಸಿವೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>